



ಡೈಲಿವಾರ್ತೆ: 12/ಮೇ/2026

ಕುಂದಾಪುರ: ಮೇ 25ರಿಂದ ಗುಡ್ಡೆಯಂಗಡಿಯಲ್ಲಿ ‘ಎಸ್ಕೆಎಫ್ ಇಂಡಸ್ಟ್ರಿಯಲ್ ಟ್ರೈನಿಂಗ್ ಸೆಂಟರ್’ ಲೋಕಾರ್ಪಣೆ

ಕುಂದಾಪುರ: ಗ್ರಾಮೀಣ ಭಾಗದ ಯುವಜನತೆಗೆ ಜಾಗತಿಕ ಮಟ್ಟದ ತಾಂತ್ರಿಕ ಕೌಶಲ್ಯ ತರಬೇತಿ ನೀಡಿ ಅವರನ್ನು ಉದ್ಯೋಗಾಕಾಂಕ್ಷಿಗಳ ಬದಲಿಗೆ ಉದ್ಯೋಗದಕ್ಷರನ್ನಾಗಿ ರೂಪಿಸುವ ಮಹತ್ವಾಕಾಂಕ್ಷೆಯೊಂದಿಗೆ ಕುಂದಾಪುರ ತಾಲೂಕಿನ ಗುಡ್ಡೆಯಂಗಡಿಯಲ್ಲಿ ‘ಎಸ್ಕೆಎಫ್ ಇಂಡಸ್ಟ್ರಿಯಲ್ ಟ್ರೈನಿಂಗ್ ಸೆಂಟರ್’ ಮೇ 25 ರಿಂದ ಕಾರ್ಯಾರಂಭ ಮಾಡಲಿದೆ.

ಮೂಡಬಿದ್ರಿಯ ಪ್ರಸಿದ್ಧ ಎಸ್ಎಫ್ ಎಲಿಕ್ಸರ್ ಇಂಡಿಯಾ ಪ್ರೈ. ಲಿ. ಸಂಸ್ಥೆಯ ಸ್ಥಾಪಕ ಹಾಗೂ ಖ್ಯಾತ ಉದ್ಯಮಿ ಡಾ. ಜಿ. ರಾಮಕೃಷ್ಣ ಆಚಾರ್ ಅವರು ಗುಡ್ಡೆಯಂಗಡಿಯಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯವನ್ನು ಪ್ರಕಟಿಸಿದರು.ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಡಾ. ರಾಮಕೃಷ್ಣ ಆಚಾರ್ ಅವರು ಕೃತಕ ಬುದ್ಧಿಮತ್ತೆ (AI) ಮತ್ತು ಆಟೋಮೇಶನ್ ಯುಗದಲ್ಲಿ ಕೈಗಾರಿಕಾ ಕ್ಷೇತ್ರವು ಕ್ಷಿಪ್ರ ಬದಲಾವಣೆಗಳಿಗೆ ಸಾಕ್ಷಿಯಾಗುತ್ತಿದೆ. 2035ರ ವೇಳೆಗೆ ಕೇವಲ ಪದವೀಧರರಿಗಿಂತ ತಾಂತ್ರಿಕ ಕೌಶಲ್ಯ ಹೊಂದಿರುವ ವ್ಯಕ್ತಿಗಳಿಗೆ ಬೇಡಿಕೆ ಹೆಚ್ಚಲಿದೆ. ನನ್ನ ಹುಟ್ಟೂರಾದ ಗುಡ್ಡೆಯಂಗಡಿಯ ಭಾಗದ ವಿದ್ಯಾರ್ಥಿಗಳು ಈ ಜಾಗತಿಕ ಅವಕಾಶಗಳನ್ನು ಬಳಸಿಕೊಳ್ಳಬೇಕು ಎನ್ನುವ ಉದ್ದೇಶದಿಂದ ಈ ಕೇಂದ್ರವನ್ನು ಸ್ಥಾಪಿಸಲಾಗುತ್ತಿದೆ ಎಂದರು.
ತರಬೇತಿಯ ಪ್ರಮುಖಾಂಶಗಳು: ಪ್ರತಿ ಬ್ಯಾಚ್ಗೆ ಕೇವಲ 20 ವಿದ್ಯಾರ್ಥಿಗಳಿಗೆ ಸೀಮಿತಗೊಳಿಸಿ ಗುಣಮಟ್ಟದ ತರಬೇತಿ ನೀಡಲಾಗುವುದು.ಇಂಟರ್ನ್ಶಿಪ್ ಅವಕಾಶ: ತರಬೇತಿ ಪೂರ್ಣಗೊಳಿಸಿದವರಿಗೆ ಮೂಡಬಿದ್ರಿಯ ಎಸ್ಎಫ್ ಎಲಿಕ್ಸರ್ ಇಂಡಿಯಾ ಸಂಸ್ಥೆಯಲ್ಲಿ 3 ತಿಂಗಳ ಇಂಟರ್ನ್ಶಿಪ್ ಒದಗಿಸಲಾಗುವುದು.
ಉದ್ಯೋಗ ಮಾರ್ಗದರ್ಶನ: ಉತ್ಪಾದನಾ ವಿಧಾನ, ಗುಣಮಟ್ಟ ಪರಿಶೀಲನೆ ಹಾಗೂ ಪ್ರಾಜೆಕ್ಟ್ ಅನುಭವದ ಜೊತೆಗೆ ವಿದೇಶಿ ಉದ್ಯೋಗಾವಕಾಶಗಳ ಬಗ್ಗೆ ಮಾರ್ಗದರ್ಶನ ನೀಡಲಾಗುವುದು.ವೈವಿಧ್ಯಮಯ ಕೋರ್ಸ್ಗಳು ಮತ್ತು ಅರ್ಹತೆ:ಸಂಸ್ಥೆಯ ತಾಂತ್ರಿಕ ಸಲಹೆಗಾರರಾದ ಎ. ಬಾಲಕೃಷ್ಣ ಮಾತನಾಡಿ, ಇಂದಿನ ಕೈಗಾರಿಕಾ ಅಗತ್ಯಕ್ಕೆ ತಕ್ಕಂತೆ ಪಠ್ಯಕ್ರಮ ರೂಪಿಸಲಾಗಿದೆ. ಇಲ್ಲಿ ಲಭ್ಯವಿರುವ ಪ್ರಮುಖ ಕೋರ್ಸ್ಗಳೆಂದರೆ: ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ಫಿಟ್ಟಿಂಗ್ & ವೆಲ್ಡಿಂಗ್ಮೆಕ್ಯಾನಿಕ್ – ರೆಫ್ರಿಜರೇಶನ್ ಮತ್ತು ಏರ್ ಕಂಡೀಷನಿಂಗ್ಪ್ಲಂಬಿಗ್ಮಹಿಳೆಯರಿಗಾಗಿ: ಫ್ಯಾಶನ್ ಡಿಸೈನಿಂಗ್, ಉಡುಪು ತಯಾರಿಕೆ ಮತ್ತು ಪ್ಯಾಟರ್ನ್ ಮೇಕಿಂಗ್.ವಿಶೇಷ ಸೂಚನೆ: ಎಸ್ಎಸ್ಎಲ್ಸಿ ಪರೀಕ್ಷೆಗೆ ಹಾಜರಾದ ಎಲ್ಲಾ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ಫಲಿತಾಂಶದಲ್ಲಿ ತೇರ್ಗಡೆ ಅಥವಾ ಅನುತ್ತೀರ್ಣ ಎಂಬ ಭೇದವಿಲ್ಲದೆ ಕೌಶಲ್ಯ ಕಲಿಯುವ ಆಸಕ್ತಿ ಇರುವವರಿಗೆ ಆದ್ಯತೆ ನೀಡಲಾಗುವುದು.
ಗ್ರಾಮೀಣಾಭಿವೃದ್ಧಿಗೆ ಪೂರಕ ಸ್ಪಂದನೆ:

ನಿವೃತ್ತ ಪ್ರಾಂಶುಪಾಲ ಬಾಲಕೃಷ್ಣ ಶೆಟ್ಟಿ ಮಾತನಾಡಿ, ಅಂತರಾಷ್ಟ್ರೀಯ ಮಟ್ಟದಲ್ಲಿ ಉದ್ಯಮ ಬೆಳೆಸಿರುವ ಡಾ. ರಾಮಕೃಷ್ಣ ಆಚಾರ್ ಅವರು ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ತಮ್ಮ ಹುಟ್ಟೂರಿನಲ್ಲಿ ಇಂತಹದೊಂದು ಕೇಂದ್ರ ಸ್ಥಾಪಿಸುತ್ತಿರುವುದು ಶ್ಲಾಘನೀಯ. ಸ್ಥಳೀಯ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಉಜ್ವಲ ಭವಿಷ್ಯ ನಿರ್ಮಿಸಿಕೊಳ್ಳಬೇಕು ಎಂದು ಕರೆ ನೀಡಿದರು.