ಡೈಲಿ ವಾರ್ತೆ : 01 ಮೇ 2022



ವರದಿ: ಶಿವಾನಂದ ಆರ್.ಬಿದರಕುಂದಿ.

ವಿಜಯಪುರ. ಮಹಿಳಾ ಕಾಂಗ್ರೆಸ್ ಸಹೋದರಿಯರೆ ನಾ ನಾಯಕಿ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ಮೇ 05 ರಂದು ಬೆಳಿಗ್ಗೆ 10 ಗಂಟೆಗೆ ಕೆಪಿಸಿಸಿ ಕಚೇರಿ ಕ್ವೀನ್ಸ್ ರೋಡ್ ಕಛೇರಿಯಲ್ಲಿ ಕರೆಯಲಾಗಿದೆ.

ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ ಅವರ ಮಾರ್ಗದರ್ಶನದಲ್ಲಿ ಹಾಗೂ ನಾ, ನಾಯಕಿ ಕಾರ್ಯಕ್ರಮದ ಅಧ್ಯಕ್ಷರಾದ ಶ್ರೀಮತಿ ಉಮಾಶ್ರೀ ಅವರು ಪಾಲ್ಗೋಳ್ಳಲ್ಲಿದ್ದಾರೆ. ಈ ಕಾರ್ಯಕ್ರಮಕ್ಕೆ ಎಲ್ಲ ಬೆಂಗಳೂರು ದಕ್ಷಿಣ ಉತ್ತರ ಮತ್ತು ಸೆಂಟ್ರಲ್ ನ ಜಿಲ್ಲಾಧ್ಯಕ್ಷರು, ಬೆಂಗಳೂರು ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಪದಾಧಿಕಾರಿಗಳು ಬ್ಲಾಕ್ ಅಧ್ಯಕ್ಷರು ಬ್ಲಾಕ್ ಪದಾಧಿಕಾರಿಗಳು ವಾರ್ಡ್ ಅಧ್ಯಕ್ಷರು ಹಾಗೂ ವಿವಿಧ ಘಟಕಗಳ ಅಧ್ಯಕ್ಷರುಗಳು ಮುಂಚೂಣಿ ಘಟಕದ ಪದಾಧಿಕಾರಿಗಳು ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೋಳಿಸಬೇಕು ಎಂದು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಡಾ.ಪುಷ್ಪ ಅಮರ್ನಾಥ್ ತಿಳಿಸಿದ್ದಾರೆ.