ಡೈಲಿ ವಾರ್ತೆ : 01 ಮೇ 2022

ಮೈಸೂರು: ಧಾರವಾಡಕ್ಕೆ ಹೊರಟಿದ್ದ ಎಕ್ಸ್ ಪ್ರೆಸ್ ರೈಲಿನಲ್ಲಿ
ದಿಢೀರ್ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೆಲ ಕಾಲ ಆತಂಕದ ಪರಿಸ್ಥಿತಿ ನಿರ್ಮಾಣವಾದ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಮೈಸೂರಿನಿಂದ ಧಾರವಾಡಕ್ಕೆ ತೆರಳುತ್ತಿದ್ದ ರೈಲಿನ ಬೋಗಿಯೊಂದರಲ್ಲಿ ಬೆಂಕಿ ಕಾಣಿಸಿದೆ. ತಕ್ಷಣವೇ ರೈಲನ್ನು ನಿಲ್ಲಿಸಿ ಪ್ರಯಾಣಿಕರನ್ನು ಇನ್ನೊಂದು ಬೋಗಿಗೆ ಸ್ಥಳಾಂತರಿಸಲಾಗಿದೆ.

ಬೆಂಕಿ ಕಾಣಿಸಿಕೊಂಡ ಪರಿಣಾಮ ಕೂಡಲೇ ಅಗ್ನಿಶಾಮಕದಳ ಸಿಬ್ಬಂದಿಗೆ ಮಾಹಿತಿ ತಿಳಿಸಲಾಗಿದ್ದು, ಸಿಬ್ಬಂದಿ ಬೆಂಕಿ ನಂದಿಸಿ ದೊಡ್ಡ ಅನಾಹುತ ತಪ್ಪಿಸಿದ್ದಾರೆ. ರಾತ್ರಿ 10.30ಕ್ಕೆ ಮೈಸೂರಿನಿಂದ ಹೊರಟಿದ್ದ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ರೈಲು ನಿಲ್ಲಿಸಿದ್ದರಿಂದ ಅನಾಹುತ ತಪ್ಪಿದೆ. ರೈಲಿನ 3ನೇ ಬೋಗಿಯಾಗಿದ್ದ D1 ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಮೈಸೂರಿನಲ್ಲೇ ರೈಲಿಗೆ ಬೆಂಕಿ ಹೊತ್ತಿಕೊಂಡಿತ್ತು. ಆದರೆ ಯಾರೂ ಗಮನಿಸಲಿಲ್ಲ. ಆದರೆ ಕೆಲ ಕ್ಷಣದಲ್ಲೇ ದೊಡ್ಡದಾಗಿ ಹರಡಿಕೊಂಡಿತು. ಪ್ರಯಾಣಿಕರು ಚೈನ್ ಎಳೆದರು. ನಾವು ರೈಲು ನಿಲ್ಲುವ ಮೊದಲೇ ಬೋಗಿಯಿಂದ ಕೆಳಗೆ ಬಿದ್ದು ಓಡಿದೆವು, ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ಪ್ರಯಾಣಿಕರೊಬ್ಬರು ತಿಳಿಸಿದ್ದಾರೆ.