ಡೈಲಿ ವಾರ್ತೆ : 01 ಮೇ 2022
ಉಡುಪಿ : ಆದಿಉಡುಪಿ ಪ್ರೌಢಶಾಲೆಯಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಪೇದೆ ರಾಜೇಶ್ ಕುಂದರ್ ರೈಫಲ್ನಲ್ಲಿ ಗುಂಡಿಕ್ಕಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಈಗ ಹೊಸ ತಿರುವು ಪಡೆದುಕೊಂಡಿದೆ. ರಾಜೇಶ್ ಕುಂದರ್ ಸಾಯುವ ಮುನ್ನ ಡೆತ್ನೋಟ್ ಬರೆದಿಟ್ಟಿದ್ದರು, ಆ ಡೆತ್ನೋಟ್ನಲ್ಲಿ ಮೂರು ಮಂದಿಯ ಹೆಸರು ಉಲ್ಲೇಖವಾಗಿದೆ ಎಂದು ತಿಳಿದು ಬಂದಿದೆ. ಪೊಲೀಸ್ ಕಾನ್ಸ್ಟೇಬಲ್ ಒಬ್ಬರ ಬ್ಯಾಗ್ ಒಂದರಲ್ಲಿ, ರಾಜೇಶ್ ಕುಂದರ್ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಆ ಡೆತ್ನೋಟ್ನಲ್ಲಿ ಪೊಲೀಸ್ ಕಾನ್ಸ್ಸ್ಟೇಬಲ್ಗಳಾದ ಉಮೇಶ್, ಮಹಮ್ಮದ್ ಆಶ್ಚಕ್ ಹಾಗೂ ಗಂಗೊಳ್ಳಿ ಎಸ್.ಐ ನಂಜ ನಾಯ್ಕ ಕಾರಣ ಎಂದು ಹೆಸರು ಉಲ್ಲೇಖ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಅದರಲ್ಲಿ ಇನ್ನೊಬ್ಬರು ಕೂಡ ತನಗೆ ಹಿಂಸೆ ನೀಡಿದ್ದಾರೆ ಎಂದು ಬರೆದಿದ್ದರು ಎಂದು ತಿಳಿದು ಬಂದಿದೆ. ಇನ್ನೊಬ್ಬರು ಯಾರೆಂದು ಪೊಲೀಸ್ ತನಿಖೆಯಲ್ಲಿ ತಿಳಿದು ಬರಬೇಕಿದೆ. ಈ ಡೆತ್ ನೋಟ್ ಆಧಾರದಲ್ಲಿ ಉಡುಪಿ ನಗರ ಠಾಣೆಯ ಸರ್ಕಲ್ ಇನ್ಸೆಕ್ಟರ್ ಪ್ರಮೋದ್ ಕುಮಾರ್ ತನಿಖೆ ನಡೆಸುತ್ತಿದ್ದಾರೆ.