ಡೈಲಿ ವಾರ್ತೆ : 06 ಮೇ 2022

ಮಹಾರಾಷ್ಟ್ರ : ಪ್ರೇಮಿಗಳಿಬ್ಬರು ಕಾಡಿನಲ್ಲಿದ್ದ ವೇಳೆ ಹುಲಿ ದಾಳಿ ಮಾಡಿ ಯುವಕನ ಕೊಂದು ಹಾಕಿರುವ ಘಟನೆ ನಡೆದಿದೆ. ಮಹಾರಾಷ್ಟ್ರದ ನಾಗುರದ ವಾತ್ಸಾ ಅರಣ್ಯ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು,ಯುವತಿ ಓಡಿಹೋಗಿ ಜೀವ ಉಳಿಸಿಕೊಂಡಿದ್ದಾಳೆ.

21 ವರ್ಷದ ಯುವಕ ತನ್ನ ಪ್ರೇಯಸಿ ಜೊತೆ ಕಾಡಿಗೆ ತೆರಳಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಮೃತನನ್ನು ಚೋಪ್ ನಿವಾಸಿ ಅಜಿತ್ ಸೋಮೇಶ್ವರ್ ನಾಕಾಡೆ ಎಂದು ಗುರುತಿಸಲಾಗಿದೆ. ಘಟನೆ ಬಳಿಕ ಆತನ ಶವ ಪತ್ತೆಯಾಗಿದ್ದು, ಮುಖ ಹಾಗೂ ಬೆನ್ನಿನ ಭಾಗವನ್ನ ಹುಲಿ ಸಂಪೂರ್ಣ ತಿಂದು ಹಾಕಿರುವುದು ಕಂಡುಬಂದಿದೆ. ಯುವತಿಗೂ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾಳೆ.

ಇಬ್ಬರು ನಗರದಿಂದ ಹೊರ ಭಾಗದ 12 ಕಿಮೀಟರ್ ದೂರದ ಅರಣ್ಯಕ್ಕೆ ತೆರಳಿದ್ದಾರೆ. ಈ ವೇಳೆ ಪೊದೆಯಲ್ಲಿ ಇಬ್ಬರು ಏಕಾಂತದಲ್ಲಿದ್ದಾಗ ಏಕಾಏಕಿ ಹುಲಿ ದಾಳಿ ಮಾಡಿದೆ. ದಾಳಿಯಲ್ಲಿ ಯುವಕ ಹುಲಿ ಬಾಯಿಗೆ ಸಿಕ್ಕು ಮೃತಪಟ್ಟಿದ್ದಾನೆ. ಆದರೆ ಯುವತಿ ಅಲ್ಲಿಂದ ಪರಾರಿಯಾಗಿದ್ದಾಳೆ. ಎಂದು ತಿಳಿದುಬಂದಿದೆ.ಹುಲಿಯನ್ನು ಸ್ಥಳಾಂತರಿಸಲು ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಅರಣ್ಯ ಇಲಾಖೆ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.