ಡೈಲಿ ವಾರ್ತೆ : 30 ಮೇ 2022

ಕುಂದಾಪುರ: ಭಾರಿ ಸಂಚಲನ ಮೂಡಿಸಿದ್ದ ಉಪ್ಪಿನ ಕುದ್ರು ಶಿಲ್ಪಾ ದೇವಾಡಿಗ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ, ಕೃತ್ಯಕ್ಕೆ ಪ್ರಚೋದನೆ ನೀಡಿದ ಆರೋಪಿಗಳ ಪೈಕಿ ಅಝೀಝ್‌ ಎಂಬಾತನನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.

ಶಿಲ್ಪಾ ಅಜೀಜ್ ಎಂಬಾತನ ಜವಳಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಳು. ಅಜೀಜ್ ಕೆಲಸದ ವೇಳೆ ಪುಸಲಾಯಿಸಿ ಶಿಲ್ಪಾ ಸ್ನೇಹ ಬೆಳೆಸಿಕೊಂಡಿದ್ದ. ಅಜೀಜ್ ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡು ವಿಡಿಯೋ ಮಾಡಿಕೊಂಡಿದ್ದ. ಬಳಿಕ ಮತಾಂತರವಾಗಿ ಮದುವೆ ಮಾಡುಕೊಳ್ಳುವಂತೆ ಶಿಲ್ಪಾಗೆ ಒತ್ತಾಯ ಮಾಡಿದ್ದು ಇದರ ಬೆನ್ನಲ್ಲೇ ಶಿಲ್ಪಾ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಫಲಿಸದೆ ಶಿಲ್ಪಾ ಸಾವನ್ನಪ್ಪಿದ್ದಳು.

ಶಿಲ್ಪಾ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಅಝೀಜ್‌ ಮತ್ತು ಆತನ ಪತ್ನಿ ಸಲ್ಮಾ ವಿರುದ್ದ ಆತ್ಮಹತ್ಯೆ ಪ್ರಚೋದನೆ ಪ್ರಕರಣ ದಾಖಲಾಗಿತ್ತು.