ಡೈಲಿ ವಾರ್ತೆ : 30 ಮೇ 2022

ಉಡುಪಿ : ಇಂದು ಬೆಳಗ್ಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ರೈತ ಮುಖಂಡ ರಾಕೇಶ್ ಟಿಕಾಯತ್ ಮುಖಕ್ಕೆ ಮಸಿ ಎರಚಿದ್ದನ್ನು ” KRS” ಪಕ್ಷದ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಎಂ. ಇಕ್ಬಾಲ್ ಕುಂಜಿಬೆಟ್ಟು ರವರು ಕಟುವಾಗಿ ಖಂಡಿಸಿದ್ದಾರೆ.

ಪೋಲಿಸ್ ಇಲಾಖೆಯು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಯಾವುದೇ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷವಾಗಿ ತನಿಖೆ ನಡೆಸಿ ಅರೋಪಿಗಳನ್ನು ಹಾಗೂ ಇದರ ಹಿಂದಿರುವ ಕಾಣದ ಕೈಗಳನ್ನು ತಕ್ಷಣ ಬಂಧಿಸಬೇಕು ಇಲ್ಲವಾದಲ್ಲಿ ರಾಜ್ಯಾದ್ಯಂತ ಉಗ್ರ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾಧ್ಯಕ್ಷರಾದ
ಅಶೋಕ್ ರಾಜ್ ಕಾಡಬೆಟ್ಟು, ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹನೀಫ್ ಕಾಪು, ಖ್ಯಾತ ವಕೀಲರಾದ ಭರತ್ ಪೈ, ಪತ್ರಕರ್ತ ಕಿರಣ್ ಪೂಜಾರಿ ಮುಖಂಡರಾದ ಸಲೀಮ್ ಮಂಚಿ, ವಿಜಯ್ ಬಾರ್ಕೂರು, ಸಫನ್ ಉಡುಪಿ,ಆಶ್ಬಕ್ ಉಸ್ಮಾನ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.