ಡೈಲಿ ವಾರ್ತೆ : 30 ಮೇ 2022

✍🏻 ಕುಮಾರ್ ನಾಯ್ಕ್ ಭಟ್ಕಳ

ಗೌರಿಬಿದನೂರು-ವಿದುರಾಶ್ವತ್ಥದ ವೀರಸೌಧಕ್ಕೆ ಬೆಂಕಿ ಇಡುತ್ತೇವೆ ಎಂದು ಹೇಳಿದ ದೇಶದ್ರೋಹಿಗಳನ್ನು ವಿರೋಧಿ ಹಾಗೂ ಬಂಧಿಸುವಂತೆ ಆಗ್ರಹಿಸಿ ಮತ್ತು
ಪಠ್ಯ ಪುಸ್ತಕದಲ್ಲಿ ಕೇಸರಿಕರಣ ವಿರೋಧಿಸಿ ಹಾಗೂ ಕುವೆಂಪು ರವರನ್ನು ಅವಮಾನಿಸಿದವರನ್ನು ಬಂಧಿಸುವಂತೆ ಆಗ್ರಹಿಸಿ ಗೌರಿಬಿದನೂರು ನಲ್ಲಿ ಕರ್ನಾಟಕ ರಣಧೀರರ ವೇದಿಕೆ ಮತ್ತು ಸಮಾನ ಮನಸ್ಕ ಹಲವು ಕನ್ನಡಪರ ಸಂಘಟನೆಗಳ ವತಿಯಿಂದ ಕರ್ನಾಟಕ ರಣದೇರರ ವೇದಿಕೆ ರಾಜ್ಯ ಅಧ್ಯಕ್ಷರಾದ ಶಂಕರ್ ಗೌಡ್ರು ಕೆ.ಆರ್ ನೇತೃತ್ವದಲ್ಲಿ ಬೃಹತ್ ಮಟ್ಟದ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ರಣಧೀರರ ವೇಧಿಕೆ ರಾಜ್ಯ ಅಧ್ಯಕ್ಷ ಶಂಕರ್ ಗೌಡ್ರು, ಶ್ರೀನಿವಾಸ್ ಗೌಡ, ಅಭಿ ಗೌಡ, ಚೇತನ ಗೌಡ್ ಎಂ, ಬಾಬು ಹುಸೇನ್, ಅನಂತ್ ಕುಮಾರ್ ರೆಡ್ಡಿ ಹಾಗೂ ಪದಾಧಿಕಾರಿಗಳು ಮತ್ತು ಸದಸ್ಯರು ಹಾಜರಿದ್ದರು.