ಡೈಲಿ ವಾರ್ತೆ : 31 ಮೇ 2022

ಕಾಪು : ಮಾದಕ ವಸ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿ ಉದ್ಯಾವರ ಗ್ರಾಮದ ಉದ್ಯಾವರ ಬಸ್ ನಿಲ್ದಾಣದ ಸಮೀಪ ಯುವಕನೋರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಉದ್ಯಾವರದ ಲಿಖಿತ್ (23) ಪೊಲೀಸರು ವಶಕ್ಕೆ ಪಡೆದ ಯುವಕ. ಕಾಪು ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಶ್ರೀಶೈಲ ಮುರಗೋಡ ಅವರು ರೌಂಡ್ಸ್ ಕರ್ತವ್ಯದಲ್ಲಿರುವಾಗ ಉದ್ಯಾವರ ಗ್ರಾಮದ ಉದ್ಯಾವರ ಬಸ್ ನಿಲ್ದಾಣದ ಸಮೀಪ ಮಾದಕ ವಸ್ತು ಸೇವಿಸಿರುವ ಅನುಮಾನದ ಮೇರೆಗೆ ಲಿಖಿತ್ ಎಂಬ ಯುವಕನನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ನಿನ್ನೆ ಲಭ್ಯವಾದ ವೈದ್ಯಕೀಯ ಪರೀಕ್ಷಾವರದಿಯಲ್ಲಿ ಯುವಕ ಗಾಂಜಾ ಸೇವನೆ ಮಾಡಿರುವುದು ಧೃಡಪಟ್ಟಿದೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.