ಡೈಲಿ ವಾರ್ತೆ : 31 ಮೇ 2022

ಬೆಂಗಳೂರು : ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ವಜಾಗೊಳಿಸಲಾಗಿದೆ. ಅವರ ಸ್ಥಾನಕ್ಕೆ ಹೆಚ್.ಆರ್. ಬಸವರಾಜಪ್ಪ ಅವರನ್ನು ನೇಮಿಸಲಾಗಿದೆ.

ಶಿವಮೊಗ್ಗದ ರೈತ ಸಂಘದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಗಿದೆ. ಖಾಸಗಿ ಚಾನೆಲ್ ನಲ್ಲಿ ಬಂದ ಭ್ರಷ್ಟಾಚಾರ ಆರೋಪವನ್ನು ಕೋಡಿಹಳ್ಳಿ ಚಂದ್ರಶೇಖರ್ ಅವರು ನಿರಾಕರಣೆ ಮಾಡಿಲ್ಲ. ತನಿಖೆ ಆಗುವವರೆಗೆ ರಾಜೀನಾಮೆ ನೀಡುವಂತೆ ಸೂಚಿಸಿದ್ದೆವು. ಆದರೆ ಅವರು ನೀಡದ ಕಾರಣ ನಾವು ವಜಾ ಮಾಡುತ್ತೇವೆ ಎಂದು ರೈತ ಸಂಘ ತಿಳಿಸಿದೆ.