ಡೈಲಿ ವಾರ್ತೆ : 31 ಮೇ 2022
ಬೆಂಗಳೂರು : ದೇವನಹಳ್ಳಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 7ರ ಚಿಕ್ಕಸಥೆ ಬಳಿ ಬಸ್’ನ ಮುಂಭಾಗ ತೆರಳುತ್ತಿದ್ದ ಟ್ರ್ಯಾಕ್ಟರ್ನ ಟೈಯರ್ ಸ್ಫೋಟಗೊಂಡ ಪರಿಣಾಮ ರಸ್ತೆಯಲ್ಲೇ ಟ್ರ್ಯಾಕ್ಟರ್ ಪಲ್ಟಿಯಾಗಿದ್ದು, ಟ್ರ್ಯಾಕ್ಟರ್ಗೆ ಡಿಕ್ಕಿ ಹೊಡೆಯುವದನ್ನ ತಪ್ಪಿಸಲು ಹೋಗಿ ಬಸ್ ರಸ್ತೆಬದಿಯ ಹಳ್ಳಕ್ಕೆ ನುಗ್ಗಿದೆ.
ಬೆಂಗಳೂರಿನಿಂದ ತಿರುಪತಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಮಾರ್ಗಮಧ್ಯೆ ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಪ್ರಾಣಹಾನಿ ಸಂಭವಿಸಿಲ್ಲ.
ಕಲ್ಲು ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಕೆಲಕಾಲ ವಾಹನಗಳ ಸಂಚಾರಕ್ಕೆ ಅಡ್ಡಿಯಾಯಿತು.
ಬಸ್ನಲ್ಲಿ ತಿರುಪತಿಗೆ ಹೋಗುತ್ತಿದ್ದವರೆಲ್ಲ ಪ್ರಾಣಪಾಯದಿಂದ ಪಾರಾಗಿದ್ದು, ಡ್ರೈವರ್ಗೆ ಸಣ್ಣಪುಟ್ಟ ಗಾಯಗಳಾಗಿವೆ. ಕೆಂಪೇಗೌಡ ಏರ್ಪೋಟ್ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.