ಡೈಲಿ ವಾರ್ತೆ : 28 ಜೂನ್ 2022

ಜೈಪುರ: ರಾಜಸ್ಥಾನದ ಉದಯಪುರದಲ್ಲಿ ನಡೆದ ಟೈಲರ್ ಹತ್ಯೆಯನ್ನು ನಮ್ಮ ನಾಡ ಒಕ್ಕೂಟ (ರಿ )ಸಂಘಟನ ಕಾರ್ಯದರ್ಶಿ ಹುಸೇನ್ ಹೈಕಾಡಿ ಖಂಡಿಸಿದ್ದಾರೆ.

ಉದಯಪುರದಲ್ಲಿ ನಡೆದ ಭೀಕರ ಹತ್ಯೆಯನ್ನು ನಾವು ಖಂಡಿಸುತ್ತೇವೆ. ಕೊಲೆಯನ್ನು ಯಾರೂ ಸಮರ್ಥಿಸಲು ಸಾಧ್ಯವಿಲ್ಲ. ಕಾನೂನನ್ನು ಕೈಗೆ ತೆಗೆದುಕೊಳ್ಳುವ ಹಕ್ಕು ಯಾರಿಗೂ ಇಲ್ಲ. ನಾವು ಯಾವಾಗಲೂ ಹಿಂಸೆಯನ್ನು ವಿರೋಧಿಸುತ್ತೇವೆ ಎಂದು ತಿಳಿಸಿದ್ದಾರೆ.

ಅಲ್ಲದೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಜೀವ ಬೆದರಿಕೆ ಒಡ್ದುವ ವಿಡಿಯೋ ಮಾಡಿ ವೈರಲ್ ಆಗಿದ್ದು ಈ ರೀತಿಯಾಗಿ ಪ್ರಧಾನಿಯವರನ್ನು ಬೆದರಿಕೆ ಹಾಕಿದವರನ್ನು ಬಂದಿಸಬೇಕು ಅವರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಹುಸೇನ್ ಹೈಕಾಡಿ ಅಗ್ರಹಿಸಿದ್ದಾರೆ.