ಡೈಲಿ ವಾರ್ತೆ : 29 ಜೂನ್ 2022

ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಜಿಲ್ಲಾ ಸಹಕಾರಿ ಕಾಂಗ್ರೆಸ್ ಅಧ್ಯಕ್ಷರಾಗಿ ಕೆ. ಅಣ್ಣಯ್ಯ ಶೇರಿಗಾರ್ ನೇಮಕ.!

ಕೆ. ಅಣ್ಣಯ್ಯ ಶೇರಿಗಾರ್ ರವರನ್ನು ಕರ್ನಾಟಕ ರಾಜ್ಯ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರು ಉಡುಪಿ ಜಿಲ್ಲಾ ಸಹಕಾರಿ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ನೀಡಿರುತ್ತಾರೆ. ಈ ಆದೇಶವನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರುರವರು ಕೆ.ಅಣ್ಣಯ್ಯ ಶೇರಿಗಾರ್ ರವರಿಗೆ ಹಸ್ತಾಂತರಿಸಿದರು.

ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವ್ಯವಸ್ಥಾಪನಾ ನಿರ್ದೇಶಕರಾಗಿ ದ.ಕ.ಜಿಲ್ಲಾ ಸಹಕಾರಿ ನೌಕರರ ಸಹಕಾರಿ ಸಂಘದ ಅಧ್ಯಕ್ಷರಾಗಿ, ಮಂಗಳ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿ ಸೇವೆಸಲ್ಲಿಸಿದ್ದ ಇವರು ಪ್ರಕ್ರತ ಆದಿತ್ಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಉಪಾಧ್ಯಕ್ಷರಾಗಿ ದುಡಿಯುತ್ತಿದ್ದಾರೆ. ನಿರಂತರ 50 ವರ್ಷ ಸಹಕಾರಿ ರಂಗದಲ್ಲಿ ದುಡಿದ ನನ್ನನ್ನು ಈ ಹುದ್ದೆಗೆ ರಾಜ್ಯ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರು ಆಯ್ಕೆ ಮಾಡಿರುವುದು ತುಂಬಾ ಸಂತೋಷವಾಗಿದೆ ಎಂದು ಶೇರಿಗಾರ್ ರವರು ತಿಳಿಸಿರುತ್ತಾರೆ.

ಈ ಸಂದರ್ಭದಲ್ಲಿ ಸಹಕಾರಿ ರಂಗದಲ್ಲಿ ಇಷ್ಟು ಎತ್ತರಕ್ಕೆ ಬೆಳೆಯಲು ಸಹಕಾರಿಯಾದ ದಿ. ಬಂಟ್ವಾಳ ನಾರಾಯಣ ನಾಯಕ್ , ದಿ. ಜಿ.ಎಸ್.ಆಚಾರ್, ಟಿ.ಶಂಭು ಶೆಟ್ಟಿ, ಜಿಲ್ಲಾ ಬ್ಯಾಂಕಿನ ಈಗಿನ ಅಧ್ಯಕ್ಷರಾ ಎಮ್.ಎನ್.ರಾಜೇಂದ್ರಕುಮಾರ್ ರವರನ್ನು ಶೇರಿಗಾರ್ ರವರು ಸ್ಮರಿಸಿಕೊಂಡಿದ್ದಾರೆ. ಅಲ್ಲದೆ ಇದಕ್ಕೆ ಸಹಕಾರಿಯಾಗಿದ್ದ ಮಾಜಿ ಮುಖ್ಯಮಂತ್ರಿ ಎಮ್. ವೀರಪ್ಪ ಮೊಯ್ಲಿಯವರನ್ನು ಕೂಡ ಜ್ನಾಪಿಸಿಕೊಂಡಿದ್ದಾರೆ. ಕೆ.ಪಿ.ಸಿ.ಸಿ ಉಪಾಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ, ಅಭಯಚಂದ್ರ ಜೈನ್, ಮಾಜಿ ವಿಧಾನ ಪರಿಷತ್ ಅಧ್ಯಕ್ಷರಾದ ಪ್ರತಾಪ್ ಚಂದ್ರ ಶೆಟ್ಟಿ, ಕೆ.ಪಿ.ಸಿ.ಸಿ ಸೊತ್ತುಗಳ ರಕ್ಷಣಾ ಸಮಿತಿ ಅಧ್ಯಕ್ಷರಾದ ಪ್ರಸಾದ್ ರಾಜ್ ಕಾಂಚನ್, ಪ್ರಧಾನ ಕಾರ್ಯದರ್ಶಿಗಳಾದ ಎಮ್.ಎ.ಗಫೂರ್, ಮಿಥುನ್ ರೈ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷರಾದ ದಿನೇಶ್ ಪುತ್ರನ್ , ಉಡುಪಿ ಬ್ಲಾಕ್ ಪ್ರಚಾರ ಸಮಿತಿ ಅಧ್ಯಕ್ಷರಾದ ಕ್ರಷ್ಣ ಮೂರ್ತಿ ಆಚಾರ್ಯ, ಮಾಜಿ ಶಾಸಕರಾದ ಗೋಪಾಲ ಪೂಜಾರಿ, ಯು.ಆರ್.ಸಭಾಪತಿಯವರ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಶುಭಾಶಯ ತನಗೆ ಸಿಕ್ಕಿದೆ ಎಂದರು. ನನಗೆ ಸಿಕ್ಕಿರುವ ಜವಾಬ್ದಾರಿಯನ್ನು ಯಶಸ್ವಿಯಾಗಿ ಪೂರೈಸುವ ಭರವಸೆ ಇದೆ ಎಂದು ತಿಳಿಸಿದರು.

ಡೈಲಿ ವಾರ್ತೆ : 29 ಜೂನ್ 2022