ಡೈಲಿ ವಾರ್ತೆ : 29 ಜೂನ್ 2022

ವರದಿ: ಶಿವಾನಂದ ಆರ್.ಬಿದರಕುಂದಿ.

ಯಾದಗಿರಿ : ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಪಟ್ಟಣದ ಛಾಯಾ ಕಾಲೋನಿ ಬಡಾವಣೆಯ ಮನೆಯೊಂದರಲ್ಲಿ ನಾಲ್ಕು ಜನರ ಮೇಲೆ ವ್ಯಕ್ತಿಯೋರ್ವ ಪಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆಯಲ್ಲಿ ಓರ್ವ ಸಾವನ್ನಪ್ಪಿದು ಮೂವರು ಗಂಭೀರ ಗಾಯಗೊಂಡಿರುವ ಅಮಾನುಷ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ.
ಘಟನೆಯಲ್ಲಿ ನಾಗಪ್ಪ ಹಗರಗುಂಡ (35) ಸಾವನ್ನಪ್ಪಿದ ದುರ್ದೈವಿಯಾಗಿದ್ದು. ಕೃತ್ಯ ಎಸಗಿದ ಆರೋಪಿ ಶರಣಪ್ಪ ಹಗರಗುಂಡನನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆಯಲ್ಲಿ ಸುಟ್ಟು ಗಾಯಾಳುಗಳಾದ ಶರಣಪ್ಪ ಪತ್ನಿ ಹುಲಿಗೆಮ್ಮಳ ತಂದೆ ಸಿದ್ದರಾಮಪ್ಪ ಮುರಾಳ (62), ಮುತ್ತಪ್ಪ ಮುರಾಳ, ನಾಗಪ್ಪ ಶರಣಪ್ಪ ಸರೂರ ಎಂದು ತಿಳಿದು ಬಂದಿದೆ. ಅವರನ್ನು ಲಿಂಗಸೂಗುರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯ ವಿವರ:
ಛಾಯಾ ಕಾಲೋನಿಯ ನಿವಾಸಿಯಾಗಿರುವ ಆರೋಪಿ ಶರಣಪ್ಪ ದಂಪತಿಗಳ ನಡುವೆ ಕೌಟುಂಬಿಕ ಸಮಸ್ಯೆ ಬಗ್ಗೆ ನ್ಯಾಯ ಪಂಚಾಯತಿ ನಡೆಸಲು (ಮಾತುಕತೆ) ಪತ್ನಿಯ ತಂದೆ ಸಿದ್ದರಾಮಪ್ಪ ಮುರಾಳ, ಮುತ್ತಪ್ಪ ಮುರಾಳ, ನಾಗಪ್ಪ ಹಗರಗುಂಡ, ಶರಣಪ್ಪ ಸರೂರ ಎಂಬುವವರು ಇಂದು ಬುಧವಾರರಂದು ಬೆಳೆಗ್ಗೆ 11-ಗಂಟೆ ಸುಮಾರಿಗೆ ನಾರಾಯಣಪುರಕ್ಕೆ ಆಗಮಿಸಿದ್ದರು, ಇದೇ ವೇಳೆ ಮನೆಯ ಮಹಡಿ ಕೊಠಡಿಯಲ್ಲಿ ನಾಲ್ಕು ಜನರೊಂದಿಗೆ ಮಾತುಕತೆ ನಡೆಸಿದ್ದ ಆರೋಪಿ ಶರಣಪ್ಪ ಮಧ್ಯದಲ್ಲಿ ಹಿರಿಯರನ್ನು ಕರೆದುಕೊಂಡು ಬರುವುದಾಗಿ ಹೇಳಿ ಕೊಠಡಿಯಲ್ಲಿ ನಾಲ್ವರನ್ನು ಕೂಡಿ ಹಾಕಿ ಬೀಗ ಜಡೆದು ಕಿಟಕಿ ಮೂಲಕ ಅವರ ಮೇಲೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಷಯ ತಿಳಿದ ಸ್ಥಳಕ್ಕೆ ಆಗಮಿಸಿದ ಪೋಲಿಸರು ಬೆಂಕಿಯಿಂದ ಸುಟ್ಟ ಗಾಯಗೊಂಡ ನಾಲ್ವರನ್ನು ಸ್ಥಳಿಯರ ಸಹಾಯದಿಂದ ಖಾಸಗಿ ವಾಹನದ ಮುಖಾಂತರ ಲಿಂಗಸೂಗುರ ಆಸ್ಪತ್ರೆಗೆ ಸಾಗಿಸುವ ವೇಳೆ ಒರ್ವ ಸಾವನ್ನಪ್ಪಿದ್ದಾನೆ.

ಸ್ಥಳಕ್ಕೆ ಸಿಪಿಐ ಭೇಟಿ: ವಿಷಯ ತಿಳಿದ ಘಟನಾ ಸ್ಥಳಕ್ಕೆ ಹುಣಸಗಿಯ ವೃತ್ತ ಸಿಪಿಐ ದೌಲತ್ ಎನ್.ಕೆ. ಸ್ಥಳಿಯ ಠಾಣೆಯ ಪಿಎಸ್ಐ ಸಿದ್ದೇಶ್ವರ ಗೆರಡೆ ಬಾಗಣ್ಣ ಬೇಟಿ ನೀಡಿ ಪರಿಶೀಲಿಸನೆ ನಡೆಸಿ ಘಟನೆಯ ಮಾಹಿತಿ ಪಡೆದಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಪಿಐ ಇದೊಂದು ಅಮಾನುಷ ಕೃತ್ಯವಾಗಿದೆ. ಆರೋಪಿಯು ಪೋಲಿಸರ ವಶದಲ್ಲಿದ್ದಾನೆ.
ಘಟನೆಯಲ್ಲಿ ಸುಟ್ಟಿರುವ ನಾಲ್ವರನ್ನು ಲಿಂಗಸೂಗುರು ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಅದರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿಸಿದರು. ನಾರಾಯಣಪೂರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.