ಡೈಲಿ ವಾರ್ತೆ : 30 ಜೂನ್ 2022

ಅಂದ್ರಪ್ರದೇಶ : ಆಟೋ ರಿಕ್ಷಾದ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಂಟು ಮಂದಿ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ಸತ್ಯಸಾಯಿ ಜಿಲ್ಲೆಯಲ್ಲಿ ನಡೆದಿದೆ.

ತಾಡಿಮರಿ ಬ್ಲಾಕ್‌ ನ ಪಲ್ಲಿಗ್ರಾಮ ಬಳಿ ಬೆಳಗ್ಗೆ 7 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಆಟೋರಿಕ್ಷಾ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ತಂತಿಗಳು ತುಂಡಾಗಿ ಆಟೋರಿಕ್ಷಾ ಮೇಲೆ ಬಿದ್ದು ಆಟೋ ಸುಟ್ಟು ಕರಕಲಾಗಿದೆ. ವಾಹನವು ಕಂಬಕ್ಕೆ ಡಿಕ್ಕಿ ಹೊಡೆದ ತಕ್ಷಣ ಚಾಲಕ ಹೊರಗೆ ಹಾರಿದ್ದಾನೆ. ಪ್ರಯಾಣಿಕರು ಇಳಿಯುವ ಮುನ್ನವೇ ಬೆಂಕಿ ಹೊತ್ತಿಕೊಂಡಿತು ಎಂದು ತಡಿಮರಿ ಎಸ್‌ಐ ರಾಷ್ಟ್ರೀಯ ಮಾಧ್ಯಮಗಳಿಗೆ ತಿಳಿಸಿದ್ದಾರೆ.