ಡೈಲಿ ವಾರ್ತೆ : 30 ಜೂನ್ 2022

ಮುಂಬೈ : ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಇಂದು ಸಂಜೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ದೇವೇಂದ್ರ ಫಡ್ನವೀಸ್ ಘೋಷಿಸಿದ್ದಾರೆ.

‘ನಾನು ಸರ್ಕಾರದ ಭಾಗವಾಗುವುದಿಲ್ಲ’ ಎಂದಿರುವ ಫಡ್ನವೀಸ್, ಶಿಂಧೆ ಅವರು ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿಸಿದ್ದಾರೆ.
‘ಶಿಂಧೆ ನೇತೃತ್ವದ ಸರ್ಕಾರವು ಕಳೆದ ಎರಡೂವರೆ ವರ್ಷಗಳಿಂದ ಸ್ಥಗಿತಗೊಂಡಿರುವ ಅನೇಕ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪರಿಹರಿಸಲಿದೆ. ಮರಾಠರು, ಒಬಿಸಿಗಳಿಗೆ ಮೀಸಲಾತಿ ನೀಡುವುದು ಮತ್ತು ಮೂಲಸೌಕರ್ಯ ಯೋಜನೆಗಳನ್ನು ಪೂರ್ಣಗೊಳಿಸುವುದು ಹೊಸ ಸರ್ಕಾರದ ಆದ್ಯತೆಯಾಗಿದೆ’ ಎಂದು ಫಡ್ನವೀಸ್ ಹೇಳಿದರು.

‘2019ರಲ್ಲಿ ಬಿಜೆಪಿ ಮತ್ತು ಶಿವಸೇನೆ ಮೈತ್ರಿಯಿಂದ ವಿಧಾನಸಭಾ ಚುನಾವಣೆಯಲ್ಲಿ ನಮಗೆ ಅಗತ್ಯ ಸಂಖ್ಯೆಗಳು ಸಿಕ್ಕವು. ನಾವು ಸರ್ಕಾರ ರಚಿಸಲು ಆಶಿಸಿದ್ದೇವು. ಆದ್ರೆ ಶಿವಸೇನೆ, ಬಾಳಾಸಾಹೇಬ್ ಅವರ ಜೀವನದುದ್ದಕ್ಕೂ ಯಾರ ವಿರುದ್ಧ ಪ್ರತಿಭಟಿಸಿದರೋ ಅವರೊಂದಿಗೆ ಮೈತ್ರಿ ಮಾಡಿಕೊಳ್ಳಲು ನಿರ್ಧರಿಸಿತು. ಈ ಮೂಲಕ ಹಿಂದುತ್ವ ಮತ್ತು ಸಾವರ್ಕರ್ ಅವರನ್ನು ವಿರೋಧಿಸುವವರೊಂದಿಗೆ ಶಿವಸೇನೆ ಮೈತ್ರಿ ಮಾಡಿಕೊಂಡು, ಶಿವಸೇನೆ ಜನಾದೇಶವನ್ನು ಅವಮಾನಿಸಿತು’ ಎಂದು ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಹೇಳಿದರು.