ಡೈಲಿ ವಾರ್ತೆ : 01 ಆಗಸ್ಟ್ 2022

ಕೋಟ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊರವಡಿ ಗ್ರಾಮದ ವಿದ್ಯಾರ್ಥಿನಿ ಅನನ್ಯ (15) ಸಿಮೇಎಣ್ಣೆ ಸುರಿದು ಆತ್ಮಹತ್ಯೆಗೈದ ಘಟನೆ ಸೋಮವಾರ ನಡೆದಿದೆ.

ಕೋಟ ಪಡುಕರೆ ಫ್ರೌಢಶಾಲೆಯ 10 ನೇ ತರಗತಿಯ ವಿದ್ಯಾರ್ಥಿನಿ ಖಿನ್ನತೆಗೊಳಗಾಗಿದ್ದು ಶಾಲೆಗೆ ಹೊರಡುವ ಸಂದರ್ಭದಲ್ಲೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಒಂದು ಕೋಣೆಗೆ ತೆರಳಿ ಸಿಮೇಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡಿದ್ದಾಳೆ. ಈ ವೇಳೆ ಪಕ್ಕದ ಮನೆಯವರು ಬೆಂಕಿಯ ಚರಹೆ ನೋಡಿ ಓಡೊಡಿ ಬಂದು ಬೆಂಕಿ ನೆಂದಿಸಲು ಪ್ರಯತ್ನಿಸಿ ಮಣಿಪಾಲದ ಖಾಸಗಿ ಆಸ್ಪತ್ರೆ ಕೊಂಡೊಯ್ದಿದ್ದರೂ ಪ್ರಯೋಜನವಾಗದೆ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ. ಮೃತಳು ಮನೆಯಲ್ಲಿ ಅಜ್ಜಿ ಮತ್ತು ಆಕೆಯ ಚಿಕ್ಕಮ್ಮನ ಜೊತೆ ವಾಸ್ತವ್ಯವಾಗಿದ್ದು ತಂದೆತಾಯಿ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಕುಂದಾಪುರ ಆರಕ್ಷಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.