ಡೈಲಿ ವಾರ್ತೆ : 30 ಆಗಸ್ಟ್ 2022

✍🏻 ಕುಮಾರ್ ನಾಯ್ಕ್ ಭಟ್ಕಳ

ಭಟ್ಕಳದಲ್ಲಿ ಅಕ್ರಮ ಗಣಿಗಾರಿಕೆ ಲಾರಿ ಸ್ವತಃ ತಾವೇ ಪತ್ತೆ ಮಾಡಿ ಪೊಲೀಸರಿಗೆ ಒಪ್ಪಿಸಿದ -ದಕ್ಷ ಪ್ರಾಮಾಣಿಕ ತಹಸೀಲ್ದಾರ್…!

ಭಟ್ಕಳ: ಅಕ್ರಮವಾಗಿ ಗಣಿಗಾರಿಕೆ ಮಾಡಿ ,ಮಣ್ಣನ್ನು ಸಾಗಿಸುತ್ತಿದ್ದ ಲಾರಿಯನ್ನು ಕಾಮಾಕ್ಷಿ ಪೆಟ್ರೋಲ್ ಪಂಪ್ ಸಮೀಪ ದಕ್ಷ ಪ್ರಾಮಾಣಿಕ ಅಧಿಕಾರಿ ತಹಶೀಲ್ದಾರ್ ಸುಮಂತ ತಡೆದು ಗ್ರಾಮೀಣ ಠಾಣೆಯ ವಶಕ್ಕೆ ನೀಡಿದ್ದಾರೆ.

ಅಕ್ರಮವಾಗಿ ಗಣಿಗಾರಿಕೆ ಮಾಡಿ ಮಣ್ಣು ತುಂಬಿದ ಲಾರಿ ಭಟ್ಕಳ ಶಂಸುದ್ದಿನ್ ಸರ್ಕಲ್ ಕಡೆಯಿಂದ ವೆಂಕಟಾಪುರದ ತೆರಳುತ್ತಿತ್ತು. ಈ ವೇಳೆ ಅದೇ ಮಾರ್ಗವಾಗಿ ಪ್ರಯಾಣಿಸುತ್ತಿದ್ದ ದಕ್ಷ ಪ್ರಾಮಾಣಿಕ ಅಧಿಕಾರಿ ತಹಶೀಲ್ದಾರ್ ಸುಮಂತ ಖುದ್ದು ತಾವೇ ಲಾರಿಯನ್ನು ತಡೆದು ಭಟ್ಕಳ ಗ್ರಾಮೀಣ ಠಾಣೆಯ ವಶಕ್ಕೆ ನೀಡಿದ್ದಾರೆ.