ಡೈಲಿ ವಾರ್ತೆ : 30 ಆಗಸ್ಟ್ 2022
ಪದೇ ಪದೇ ಚಡ್ಡಿಯಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದಾನೆ ಎಂದು ಬಾಲಕನ ಗುಪ್ತಾಂಗವನ್ನೇ ಸುಟ್ಟ ಶಿಕ್ಷಕಿ..!
ತುಮಕೂರು : ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಅಂಗನವಾಡಿಯೊಂದರಲ್ಲಿ
3 ವರ್ಷದ ಬಾಲಕ ಪದೇ ಪದೇ ಚಡ್ಡಿಯಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದಾನೆ ಎಂದು ಅಂಗನವಾಡಿ ಶಿಕ್ಷಕಿ ಹಾಗೂ ಸಹಾಯಕಿ ಆತನ ಗುಪ್ತಾಂಗವನ್ನೇ ಸುಟ್ಟ ಘಟನೆ ನಡೆದಿದೆ.
ಪೋಷಕರು ಬಾಲಕನ ಗುಪ್ತಾಂಗ ಹಾಗೂ ತೊಡೆಯ ಭಾಗದಲ್ಲಿ ಸುಟ್ಟ ಗಾಯಗಳನ್ನು ನೋಡಿದಾಗ ಅಸಲಿ ವಿಚಾರ ಬೆಳಕಿಗೆ ಬಂದಿದೆ.
ಈ ಕುರಿತು ತನಿಖೆ ನಡೆಸಲು ಜಿಲ್ಲಾ ಮಕ್ಕಳ ಹಕ್ಕು ರಕ್ಷಣಾ ಘಟಕದ ಅಧಿಕಾರಿಗಳು ಚಿಕ್ಕನಾಯಕನಹಳ್ಳಿ ಗ್ರಾಮಕ್ಕೆ ಬಂದಿದ್ದಾರೆ.
ಅಲ್ಲದೇ ತಾಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿಗಳು ಚಿಕ್ಕನಾಯಕನಹಳ್ಳಿ ಅಂಗನವಾಡಿಯ ಶಿಕ್ಷಕಿ ಹಾಗೂ ಸಹಾಯಕಿಗೆ ನೋಟಿಸ್ ನೀಡಿದ್ದಾರೆ.
ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.