ಡೈಲಿ ವಾರ್ತೆ : 30 ಆಗಸ್ಟ್ 2022

ಮೊಳಹಳ್ಳಿ: ಖ್ಯಾತ ಉದ್ಯಮಿ ಬಾಲಕೃಷ್ಣ ಶೆಟ್ಟಿ ಅಸ್ತಂಗತ…!

ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಮೊಳಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೊಳಹಳ್ಳಿ ಕೆಳಹೆಸಿನಕಟ್ಟೆ ಯ ಖ್ಯಾತ ಉದ್ಯಮಿ “ಮೊಳಹಳ್ಳಿ ಬಾಲಕೃಷ್ಣ ಶೆಟ್ಟಿ ತೀವ್ರ ಹೃದಯಾಘಾತದಿಂದ ಪುಣೆಯಲ್ಲಿ ಅಸುನೀಗಿದ್ದಾರೆ.

ಪುಣೆ ಬಂಟರ ಸಂಘದ ಮಾಜಿ ಅಧ್ಯಕ್ಷರಾಗಿ,ಹಲವಾರು ಸಂಘ ಸಂಸ್ಥೆಗಳಲ್ಲಿ ಸದಸ್ಯರಾಗಿ, ಸಾಮಾಜಿಕ ಕಳಕಳಿ ಹೊಂದಿರುವ ಜವಾದ್ಬಾರಿಯುತ ಸಮಾಜದಲ್ಲಿ ಗುರುತಿಸಿಕೊಂಡ ಮೇಧಾವಿ,ಹಲವಾರು ಸಂಘ ಸಂಸ್ಥೆಗಳಲ್ಲಿ ತನ್ನನ್ನು ತೊಡಗಿಸಿ ಕೊಂಡು ಸಮಾಜಮುಖಿ ಚಿಂತನೆಯ ಅಭಿವ್ಯಕ್ತಿಯಾಗಿ ಬದುಕಿ, ಸಮಾಜಕ್ಕೆ ಸೈ ಎನಿಸಿಕೊಂಡವರು.

ಇತ್ತೀಚೆಗೆ ಮೊಳಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅದ್ದೂರಿಯಾಗಿ ಹುಟ್ಟೂರ ಸನ್ಮಾನ ಕಾರ್ಯಕ್ರಮವೂ ಕೂಡ ನೆರವೇರಿತ್ತು.

ಬಾಲ್ಯದಿಂದ ಮೊಳಹಳ್ಳಿ ಎಂಬ ಪುಟ್ಟ ಊರಿನಲ್ಲಿ ಜನಿಸಿ ಜಗದಗಲ ತನ್ನ ಉದ್ಯಮವನ್ನು ಪಸರಿಸಿದ ಕೀರ್ತಿ ತಂದ ವ್ಯಕ್ತಿತ್ವ .ಕಳೆದ 2ದಿನಗಳ ಹಿಂದೆ ಹೃದಯ ಸಂಬಂಧಿ ನೋವು ಕಾಣಿಸಿಕೊಂಡಿದ್ದು ಅದರ ನಿಮಿತ್ತ ,ಪುಣೆಯ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಯಿತು.ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದರು.ಮೊಳಹಳ್ಳಿ ಬಾಲಕೃಷ್ಣ ಶೆಟ್ಟಿ ಅವರು 68 ವರ್ಷ ಪ್ರಾಯದವರಾಗಿದ್ದು ,ಇಬ್ಬರು ಪುತ್ರರು ಹಾಗೂ ಪತ್ನಿ ,ಕುಟುಂಬಸ್ಥರನ್ನ , ಅಪಾರ ಬಂಧು ಬಳಗವನ್ನು ಅಗಲಿದ್ದಾರೆ ಪುಣೆಯಲ್ಲಿ ವಿಧಿವಿಧಾನ ನೆರವೇರಿಸಲಿದ್ದಾರೆ ಎಂದು ಕುಟುಂಬಸ್ಥರ ಮೂಲಗಳು ತಿಳಿಸಿವೆ.