ಡೈಲಿ ವಾರ್ತೆ : 01 ಸೆಪ್ಟೆಂಬರ್ 2022

ಸೇತುವೆ ನಿರ್ಮಾಣವಾಗದ ಹಿನ್ನಲೆ ಗ್ರಾಮಸ್ಥರಿಂದ ಗ್ರಾ. ಪಂ ಕಚೇರಿ ಮುಂಭಾಗವೇ ಶವ ಹೂತು ಆಕ್ರೋಶ…!

ಚಾಮರಾಜನಗರ: ಮಹಿಳೆಯ ಶವವನ್ನು ಗ್ರಾಮ ಪಂಚಾಯತ್ ಕಚೇರಿ ಮುಂಭಾಗವೇ ಹೂತು ಹಾಕಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಯಳಂದೂರು ತಾಲೂಕಿನ ಮಾಂಬಳ್ಳಿ ಗ್ರಾಮದಲ್ಲಿ ನಡೆದಿದೆ.


ಮಾಂಬಳ್ಳಿ ಗ್ರಾಮದ ಚಂದ್ರಮ್ಮ ಎಂಬ ಮಹಿಳೆ ನಿನ್ನೆ ಸಾವನ್ನಪ್ಪಿದ್ದರು. ಆದರೆ ಸುವರ್ಣಾವತಿ ಜಲಾಶಯದ ಹೊರಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಶವವನ್ನು ಸ್ಮಶಾನಕ್ಕೆ ತೆರಳಲು ಸೇತುವೆ ಇಲ್ಲದಿರುವುದರಿಂದ ಅಂತ್ಯಸಂಸ್ಕಾರ ನೆರವೇರಿಸಲು ಅಸಾಧ್ಯ ಪರಿಸ್ಥಿತಿ ನಿರ್ಮಾಣವಾಗಿತ್ತು.

ಜಿಲ್ಲಾಡಳಿತ ಮತ್ತು ಸ್ಥಳೀಯ ಶಾಸಕರಿಗೆ ಹತ್ತಾರು ವರ್ಷಗಳಿಂದ ಮನವಿ ಮಾಡುತ್ತ ಬಂದಿದ್ದರೂ ಸೇತುವೆ ನಿರ್ಮಾಣವಾಗದ ಹಿನ್ನೆಲೆಯಲ್ಲಿ ಇಂದು ಗ್ರಾಪಂ ಕಚೇರಿ ಆವರಣದಲ್ಲೇ ಶವವನ್ನು ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ.