ಡೈಲಿ ವಾರ್ತೆ : 25 ಸೆಪ್ಟೆಂಬರ್ 2022

ಶಿವಮೊಗ್ಗ: ವಿದ್ಯುತ್ ತಂತಿ ಬೇಲಿ ಸ್ಪರ್ಶಸಿ 2 ಗಂಡಾನೆಗಳ ಸಾವು.!

ಶಿವಮೊಗ್ಗ: ವಿದ್ಯುತ್ ತಂತಿ ಸ್ಪರ್ಶವಾಗಿ 2 ಆನೆಗಳ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ತಾಲೂಕಿನ ಆಯನೂರು ಸಮೀಪದ ಶೆಟ್ಟಿಹಳ್ಳಿ ಅಭಯಾರಣ್ಯ ವ್ಯಾಪ್ತಿಯ ಚನ್ನಹಳ್ಳಿಯಲ್ಲಿ ನಡೆದಿದೆ.

ಅರಣ್ಯದಂಚಿನ ಭಾಗದ ರೈತರು ಜೋಳದ ಹೊಲಕ್ಕೆ ವಿದ್ಯುತ್ ತಂತಿ ಬೇಲಿ ಅಳವಡಿಸಿದ್ದಾರೆ.

ಜೋಳದ ಹೊಲಕ್ಕೆ ಬಂದ ಕಾಡಾನೆಗಳಿಗೆ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟಿವೆ.

20 ಮತ್ತು 22 ವರ್ಷದ ಗಂಡು ಆನೆಗಳು ಮೃತಪಟ್ಟಿವೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಡು ಹಂದಿ ಭೇಟೆಯಾಡಲು ವಿದ್ಯತ್ ತಂತಿ ಹಾಕಿರುವ ಶಂಕೆ ವ್ಯಕ್ತವಾಗಿದೆ.