ಬಾಗಲಕೋಟೆ : ಕರ್ತವ್ಯ ಲೋಪದ ಆರೋಪ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲಾ ಪಂಚಾಯತಿ ಎಂಜಿನಿಯರಿಂಗ್ ವಿಭಾಗದ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಸುರೇಶ್ ಹರನಾಳ ಇಂದು ಅಮಾನತುಗೊಳಿಸಿ ಜಿ.ಪಂ ಸಿಇಓ ಟಿ.ಭೂಬಾಲನ್ ಆದೇಶ ಹೊರಡಿಸಿದ್ದಾರೆ.

ಅಮಾನತ್ತುಗೊಂಡ ಸುರೇಶ ಹರನಾಳ್ ಅವರು ಕೆಲಸದ ವೇಳೆ ಸರಿಯಾಗಿ ಕಾರ್ಯ ನಿರ್ವಹಿಸದೆ ಗೈರು ಹಾಜರಾಗುತ್ತಿದ್ದರು. ಜತೆಗೆ ಕರ್ತವ್ಯ ಲೋಪದ ಆರೋಪದ ಹಿನ್ನೆಲೆಯಲ್ಲಿ ಅಮಾನತು ಗೊಳಿಸಲಾಗಿದೆ ಎಂದು ಸಿಇಓ ತಿಳಿಸಿದ್ದಾರೆ.