ಡೈಲಿ ವಾರ್ತೆ : 28 ಸೆಪ್ಟೆಂಬರ್ 2022

ಮಣಿಪಾಲದಲ್ಲಿ ಗಾಂಜಾ ಸೇವಿಸುತ್ತಿದ್ದ ನಾಲ್ವರು ವಶಕ್ಕೆ

ಉಡುಪಿ: ನಗರದ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ನಾಲ್ವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.


ಮಣಿಪಾಲದ ರಾಯಲ್‌ ಎಂಬೆಸಿ ಬಳಿ ಕರಣ್‌ ಆರ್‌.ಕೆ. (21), ಪೂರ್ಣ ಸೋಮೇಶ್ವರ (23), ನಿಯಾಲ್‌ ಗೋವೆಸ್‌ (20), ಕೆನ್ನೆತ್‌ ಡಿ’ಸೋಜಾ (27) ರನ್ನು ವಶಕ್ಕೆ ಪಡೆಯಲಾಗಿದೆ.


ಫಾರೆನ್ಸಿಕ್‌ ವರದಿಯಲ್ಲಿ ಗಾಂಜಾ ಸೇವನೆ ದೃಢಪಟ್ಟಿದೆ. ಸೆನ್‌ ಅಪರಾಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.