ಡೈಲಿ ವಾರ್ತೆ : 28 ಸೆಪ್ಟೆಂಬರ್ 2022

ಸಿಡಿಲು ಬಡಿದು ತಾಯಿ, ಇಬ್ಬರು ಮಕ್ಕಳು ಸೇರಿ ನಾಲ್ವರು ಸಾವು

ಯಾದಗಿರಿ: ಸಿಡಿಲು ಬಡಿದು ತಾಯಿ,ಇಬ್ಬರು ಮಕ್ಕಳು ಸೇರಿ ನಾಲ್ವರು ಸಾವನ್ನಪ್ಪಿರುವ ಘಟನೆ ಗುರುಮಠಕಲ್‌ ತಾಲೂಕಿನ ಎಸ್ ಹೊಸಹಳ್ಳಿ ಬಳಿ ನಡೆದಿದೆ. ಗಾಜರಕೋಟ ಗ್ರಾಮದ ಮೋನಮ್ಮ (25) ಭಾನು (4) ಶ್ರೀನಿವಾಸ್ (2), ಎಸ್ ಹೊಸಹಳ್ಳಿ ಗ್ರಾಮ ಸಾಬಣ್ಣ (17) ಮೃತ ದುರ್ದೈವಿಗಳು. ಓರ್ವ ಯುವಕನಿಗೆ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ಮಧ್ಯಾಹ್ನ ಯಾದಗಿರಿಯಿಂದ ಊರಿಗೆ ಹೋಗುವಾಗ ಸುರಿದ ಮಳೆಯಿಂದಾಗಿ ಸಿಡಲು ಬಡಿದು ಸಾವನ್ನಪ್ಪಿದ್ದಾರೆ.

ಗುರುಮಠಕಲ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.