ಡೈಲಿ ವಾರ್ತೆ : 29 ಸೆಪ್ಟೆಂಬರ್ 2022

ಭಟ್ಕಳ: ಎರಡು ಬೈಕ್‌ಗಳ ನಡುವೆ ಅಪಘಾತ: ಓರ್ವ ಮೃತ್ಯು, ಮತ್ತೋರ್ವ ಗಂಭೀರ

ಭಟ್ಕಳ: ತಾಲೂಕಿನ ಶಿರಾಲಿ ಚೆಕ್ ಪೋಸ್ಟ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಬೈಕ್ ಗಳ ನಡುವೆ ಢಿಕ್ಕಿ ಸಂಭವಿಸಿ, ಓರ್ವ ಬೈಕ್ ಸವಾರ ಸಾವನ್ನಪ್ಪಿದ್ದು, ಮತ್ತೊಬ್ಬ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಅಪಘಾತದಲ್ಲಿ ಮೃತಪಟ್ಟ ಬೈಕ್ ಸವಾರನನ್ನು ಶಿರಾಲಿಯ ಗುಡಿಹಿತ್ತಲ್ ನಿವಾಸಿ ಸುರೇಶ್ ಮಾಸ್ತಪ್ಪ ನಾಯ್ಕ (34) ಎಂದು ಗುರುತಿಲಾಗಿದೆ.
ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಮೊಗೇರಕೇರಿ ನಿವಾಸಿ ತಿಮ್ಮಪ್ಪ ಮೊಗೇರ(29)ರನ್ನು ಭಟ್ಕಳದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.

ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಭರತ್ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.