ಡೈಲಿ ವಾರ್ತೆ : 30 ಸೆಪ್ಟೆಂಬರ್ 2022

ಕುಂದಾಪುರ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜ್ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ.

ಕುಂದಾಪುರ : ಶಿವಮೊಗ್ಗ ಮಹಾನಗರಪಾಲಿಕೆ, ಕರ್ನಾಟಕ ರಾಜ್ಯ ಕರಾಟೆ ಅಸೋಸಿಯೇಷನ್ (ರಿ) ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ (ರಿ) ಶಿವಮೊಗ್ಗ ಪ್ರಯೋಜಕತ್ವದಲ್ಲಿ ಶಿವಮೊಗ್ಗ ಮಕ್ಕಳ ದಸರಾ 2022 ಅಂಗವಾಗಿ 2ನೇ ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿಯು ನೆಹರು ಒಳಾಂಗಣ ಕ್ರೀಡಾಂಗಣ ಶಿವಮೊಗ್ಗ ಇಲ್ಲಿ ಸೆ. 27 ರಂದು ನಡೆದಿದ್ದು.

ಕುಂದಾಪುರ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿಘ್ನೇಶ್ ನಾಯಕ್ 45 ಕೆಜಿ
ಪುರುಷರ ವಿಭಾಗದಲ್ಲಿ ಪ್ರಥಮ ಸ್ಥಾನ, ದ್ವಿತೀಯ ವಿಜ್ಞಾನ ವಿಭಾಗದ ಮೊಹಮ್ಮದ್ ಅನೀಸ್ 55 ಕೆಜಿ ಪುರುಷರ ವಿಭಾಗದಲ್ಲಿ್ರಥಮ ಸ್ಥಾನ,
ದ್ವಿತೀಯ ವಾಣಿಜ್ಯ ವಿಭಾಗದ ಸುಜನ್ ಶೆಟ್ಟಿ 50
ಕೆಜಿ ಪುರುಷರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಹಾಗೂ
ದ್ವಿತೀಯ ವಾಣಿಜ್ಯ ವಿಭಾಗದ ಆಯುಷ್ ಪುತ್ರನ್ 60 ಕೆಜಿ
ಪುರುಷರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು
ಕಾಲೇಜಿಗೆ ಕೀರ್ತಿಯನ್ನು ತಂದಿರುತ್ತಾರೆ.

ಇವರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿ, ಕಾಲೇಜಿನ ಆಡಳಿತ ಮಂಡಳಿ,ಪನ್ಯಾಸಕ ವೃಂದದವರು ಮತ್ತು ಶಿಕ್ಷಕೇತರ
ವೃಂದದವರು ಅಭಿನಂದಿಸಿದ್ದಾರೆ.