ಡೈಲಿ ವಾರ್ತೆ : 30 ಸೆಪ್ಟೆಂಬರ್ 2022

✍ಕೆ.ಸಂತೋಷ್ ಶೆಟ್ಟಿ ಮೊಳಹಳ್ಳಿ. ಕುಂದಾಪುರ.ಉಡುಪಿ ಜಿಲ್ಲೆ.(ಮಾಧ್ಯಮ ವಿಶ್ಲೇಷಕರು& ಪತ್ರಕರ್ತರು)
ಮ:9632581508

ರಾಜ್ಯಾದ್ಯಂತ ಆರ್.ಟಿ.ಓ ಚೆಕ್ ಪೋಸ್ಟ್ಗಳ ಮೇಲೆ ಬೆಳ್ಳಂಬೆಳ್ಳಗೆ ಲೋಕಾಯುಕ್ತ ದಾಳಿ: ಒಂದೂವರೆ ಲಕ್ಷ ರೂ. ಪತ್ತೆ…!”

  • “ಕಳ್ಳಸಾಗಣೆ, ಕಮಿಷನ್ ದಂಧೆಯ ಹೆಸರಿನಲ್ಲಿ ಆರ್.ಟಿ.ಓ ಗಳಲ್ಲಿ ಹಗಲು ದರೋಡೆ….!”ಲೋಕಾಯುಕ್ತರ ಮಿಂಚಿನ ಕಾರ್ಯಾಚರಣೆಯಲ್ಲಿ ಅಧಿಕಾರಿಗಳ ಬಂಡವಾಳ ಬಯಲು…!” ಇಲ್ಲಿ ಪೊಲೀಸರೇ ಲಂಚಕೋರರು….!”?

ಬೆಂಗಳೂರು: ಕರ್ನಾಟಕದ ವಿವಿಧ ಕಡೆ ಲೋಕಾಯುಕ್ತ ದಾಳಿ ನಡೆಸಿ ಕಳ್ಳ ಭ್ರಷ್ಟ ಪೊಲೀಸ್ ಅಧಿಕಾರಿಗಳ ಹೆಡೆಮುರಿ ಕಟ್ಟಿದೆ ಲೋಕಾಯುಕ್ತರು.ರಾಜ್ಯಾದ್ಯಂತ ವಾಹನಗಳ ತಪಾಸಣಾ ಕೇಂದ್ರದ ಮೇಲೆ ಲೋಕಾಯುಕ್ತರು ಬೆಳ್ಳಂಬೆಳಿಗ್ಗೆ ದಾಳಿ ಮಾಡಿ ವಾಹನ ಚಾಲಕರಿಂದ ವಸೂಲಿ ಮಾಡಿದ ಹಣವನ್ನು ಪೋಲಿಸರಿಂದ ಲೋಕಾಯುಕ್ತ ವಶಪಡಿಸಿಕೊಂಡಿದೆ.ಆರ್ ಟಿಒ ಸಂಸ್ಥೆಯು ಹಗಲು ದರೋಡೆಗಿಳಿದಿರುವುದು ಪ್ರತಿಯೊಂದು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಕಾಣಬಹುದು.ಚಾಲನೆಯ ನೆಪದಲ್ಲಿ ಹಲವಾರು ಕಾರಣಗಳನ್ನು ಕೊಟ್ಟು ಚಾಲಕರಿಂದ ಹಣ ವಸೂಲಿ ಮಾಡಿ ಈ ರೀತಿ ಮಾಡುತ್ತಿರುವ ಹಗಲು ದಂಧೆ ರಾಜಾರೋಷವಾಗಿ ನಡೆಯುತ್ತಿತ್ತು.ಆದರೆ ಇಂದು ಬೆಳಿಗ್ಗೆ ರಾಜ್ಯಾದ್ಯಂತ ಲೋಕಾಯುಕ್ತರು ಫೀಲ್ಡಿಗಿಳಿದು ಲಕ್ಷಕ್ಕಿಂತಲೂ ಹೆಚ್ಚು ಹಣವನ್ನು ವಸೂಲಿ ಮಾಡಿ ಕಳ್ಳ ಪೊಲೀಸರ ಹೆಡೆಮುರಿ ಕಟ್ಟಿದ್ದಾರೆ.ವಾಹನ ಸವಾರರಿಂದ ದೂರು ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ವಾಹನ ಸವಾರರಿಂದ ಹಣ ವಸೂಲಿ ಕುರಿತು ದೂರು ಹಿನ್ನೆಲೆ ರಾಜ್ಯದ ಹಲವೆಡೆ RTO ಚೆಕ್ ಪೋಸ್ಟ್ಗಳ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಬೆಂಗಳೂರು ಹೊರವಲಯದಲ್ಲಿನ ಅತ್ತಿಬೆಲೆ, ಬೀದರ್ ಜಿಲ್ಲೆಯ ಹುಮ್ನಾಬಾದ್, ಬಳ್ಳಾರಿಯ ಹಗರಿ RTO ಚೆಕ್ ಪೋಸ್ಟ್ ಮೇಲೂ ದಾಳಿ ಮಾಡಲಾಗಿದೆ. ಬೀದರ್, ಕಲ್ಬುರ್ಗಿ ಎಸ್ಪಿ ಪಿ.ಕರ್ನೂಲ್ ನೇತೃತ್ವದ ತಂಡದಿಂದ ಬೆಳಗ್ಗೆ ನಾಲ್ಕು ಗಂಟೆಗೆ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಚೇಕ್ ಪೋಸ್ಟ್ನಲ್ಲಿ ಒಂದೂವರೆ ಲಕ್ಷ ರೂಪಾಯಿ ಹಣ ಪತ್ತೆಯಾಗಿದೆ. ಪತ್ತೆಯಾದ ಹಣ ದಂಡ ಹಾಕಿದ್ದೋ ಅಥವಾ ಲಂಚದ ಹಣವೋ ಎಂದು ಅಧಿಕಾರಿಗಳು ಪರೀಲನೆಗೆ ತೊಡಗಿದ್ದಾರೆ. ಆರ್ಟಿಓ ಅಧಿಕಾರಿ ಹೇಮಂತ ಎನ್ನುವವರ ಬಳಿ ಲೋಕಾಯುಕ್ತ ಅಧಿಕಾರಿಗಳು ಮಾಹಿತಿ ಕಲೆ ಹಾರುತ್ತಿದ್ದಾರೆ.

ತುಮಕೂರು: ದಸರಾ ಹಬ್ಬ ಹಿನ್ನೆಲೆಯಲ್ಲಿ ಖಾಸಗಿ ಬಸ್ ಮೇಲೆ ಆರ್ಟಿಓ ಅಧಿಕಾರಿಗಳ ದಾಳಿ ಮಾಡಿದ್ದು, ಬೆಂಗಳೂರು ಹಾಗೂ ಹೊಸದುರ್ಗಕ್ಕೆ ಓಡಾಡುತ್ತಿದ್ದ ಕ41 ಸಿ 8898 ಹಾಗೂ ಕೆ ಎ 41 c 8903 ನಂಬರ್ನ ಎರಡು‌ ಖಾಸಗಿ ಬಸ್ ವಶಕ್ಕೆ ಪಡೆದಿದ್ದಾರೆ. ತುಮಕೂರು ಆರ್ಟಿಓ ಇನ್ಸಪೇಕ್ಟರ್ ಷರೀಪ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ದಸರಾ ಹಬ್ಬಕ್ಕೆ ಹೆಚ್ಚಿನ ಶುಲ್ಕ ಪಡೆಯುತ್ತಾರೆಂಬ ದೂರು ಬಂದ ಹಿನ್ನೆಲೆಯಲ್ಲಿ ದಾಳಿ ಮಾಡಲಾಗಿದೆ. ಪರ್ಮಿಟ್ ಹಾಗೂ ಟ್ಯಾಕ್ಸ್ ಇಲ್ಲದೇ ಓಡಾಡುತ್ತಿರುವ ಬಸ್ಗಳ ಮೇಲೂ ದಾಳಿ ಮಾಡಿದ್ದಾರೆ. ಕೇವಲ ಬೆಂಗಳೂರಿನಲ್ಲಿ ಓಡಿಸಲು ಪರ್ಮಿಟ್ ಇರುವ ಬಸ್ಗಳು, ಆದರೆ ಬೆಂಗಳೂರಿನಿಂದ ಹೊಸದುರ್ಗ ನಡುವೆ ಬಸ್ಗಳು ಓಡಾಟ ಮಾಡುತ್ತಿದ್ದವು. ಬೆಂಗಳೂರಿನಲ್ಲಿ ಫ್ಯಾಕ್ಟರಿಗಳಿಗೆ ಓಡಾಡಲು ಬಳಸುವ ಬಸ್ನಲ್ಲಿ ಪ್ರಯಾಣಿಕರಿದ್ದ ಕಾರಣ ದಾಳಿ ಮಾಡಲಾಗಿದೆ.

ಕೋಲಾರ ಜಿಲ್ಲೆ ಮುಳಬಾಗಿಲು ತಾಲ್ಲೂಕು ನಂಗಲಿ ಆರ್.ಟಿ.ಓ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ಎಸ್ಪಿ ಉಮೇಶ್ ನೇತೃತ್ವದ ತಂಡ ದಾಳಿ ಮಾಡಿದೆ. ಗಡಿ ಭಾಗದಲ್ಲಿ ವಾಹನಗಳಿಂದ ಹಣ ವಸೂಲಿ ಆರೋಪ ಹಿನ್ನೆಲೆ ದಾಳಿ ಮಾಡಿದ್ದು, ಅಧಿಕಾರಿಗಳು ದಾಖಲಾತಿಗಳ ಪರಿಶೀಲನೆ ನಡೆಸುತ್ತಿದ್ದಾರೆ.ವಿಜಯಪುರ ಜಿಲ್ಲೆಯ ಹೊಸಪೇಟೆಯ ಹೊರವಲಯದ ಶನೇಶ್ವರ ದೇವಾಲಯದ ಬಳಿ ಇರೋ RTO ಚೆಕ್ ಪೋಸ್ಟ್ ಮೇಲೆ ಬೆಳಗಿನ ಜಾವ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. DYSP ಅಯ್ಯನಗೌಡ ನೇತೃತ್ವದಲ್ಲಿ ದಾಳಿ ಮಾಡಿದ್ದು, ದಾಳಿ ವೇಳೆ ಯಾರೂ ಇರಲಿಲ್ಲ ಎಂಬ ಮಾಹಿತಿ ನೀಡಲಾಗಿದೆ. ಭಾರಿ ವಾಹನಗಳು ಸೇರಿದಂತೆ ಇತರೆ ವಾಹನ ಚಾಲಕರ ಬಳಿ ಹಣ ವಸೂಲಿ ಆರೋಪ ಕೇಳಿಬಂದಿದ್ದು, ದೂರಿನ ಆಧಾರದ ಮೇಲೆ ದಾಳಿ ಮಾಡಲಾಗಿದೆ. ಇನ್ನು ಬೆಳಗಾವಿ ಜಿಲ್ಲೆ ನಿಪ್ಪಾಣಿ ತಾಲೂಕಿನ ಕೊಗನೊಳ್ಳಿಯ ಬೆಂಗಳೂರು-ಮುಂಬೈ ರಾಷ್ಟ್ರೀಯ ಹೆದ್ದಾರಿ 4ರಲ್ಲಿರುವ ಚೆಕ್ ಪೋಸ್ಟ್ ಮೇಲೂ ಅಧಿಕಾರಿಗಳು ದಾಳಿ ಮಾಡಿದ್ದು, ದಾಳಿ ವೇಳೆ ಚೆಕ್ಪೋಸ್ಟ್ನಲ್ಲಿ ನಗದು ಪತ್ತೆಯಾಗಿದೆ.
“ಆರ್. ಟಿ. ಓ ತಪಾಸಣಾ ಕೇಂದ್ರದಲ್ಲಿ ಅಧಿಕಾರಿಗಳು ಚಾಲಕರಿಗೆ ಹೆದರಿಸಿ ಬೆದರಿಸಿ ಹಣ ವಸೂಲಿ ಮಾಡಿ ಹಲವಾರು ಪ್ರಕರಣಗಳು ಬೆಳಕಿಗೆ ಬಂದ ಹಿನ್ನಲೆ,ಎಂದು ಲೋಕಾಯುಕ್ತ ದಾಳಿಗೆ ಹಲವರು ಪೊಲೀಸರು ಬಲೆಗೆ ಸಿಕ್ಕಿ ಹಾಕಿಕೊಂಡಿದ್ದಾರೆ.ಇಂತಹ ಪ್ರಕರಣಗಳು ಇಲ್ಲಿಗೆ. ಆದರೆ ಮಾತ್ರ ಆರ್ ಟಿ ಓ ಸಂಸ್ಥೆಗೆ ಉಳಿಗಾಲ…!ಒಟ್ಟಾರೆಯಾಗಿ ಕರ್ನಾಟಕದ ಸರ್ಕಾರದ ಸುಪರ್ದಿಗೆ ಸೇರುವ ಆರ್ ಟಿಒ ಸಂಸ್ಥೆ ಈ ರೀತಿಯಾದ ಬಿಸಿ ಮುಟ್ಟಿಸಿದರೆ ಮಾತ್ರ ಸಾಧ್ಯ .ಇಲ್ಲವಾದರೆ ಭ್ರಷ್ಟ ಪೊಲೀಸ್ ಅಧಿಕಾರಿಗಳೇ ಹಣವನ್ನು ನುಂಗಿ ನೀರು ಕುಡಿಯುತ್ತಾರೆ.ಇನ್ನಾದರೂ ಎಚ್ಚೆತ್ತುಕೊಳ್ಳಲಿ ಎನ್ನುವುದೇ ಪತ್ರಿಕೆಯ ಆಶಯ.”