ಡೈಲಿ ವಾರ್ತೆ: 02 ಅಕ್ಟೋಬರ್ 2022

ಕೋಟ: ಮಣೂರು ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ಶರನ್ನವರಾತ್ರಿ ಪ್ರಯುಕ್ತ ಭಜನೆ ಹಾಗೂ ತಾಳಮದ್ದಳೆ ಕಾರ್ಯಕ್ರಮ

ಕೋಟ: ಮಣೂರು ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ಶರನ್ನವರಾತ್ರಿ ಪ್ರಯುಕ್ತ ಪ್ರತಿದಿನ ಭಜನೆ ಕಾರ್ಯಕ್ರಮ ನಡೆಯಿತು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಸತೀಶ್ ಬಿ. ಕುಂದರ್ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಅ.1 ರಂದು ಮಹಿಳಾ ಯಕ್ಷ ಬಳಗ ಕೋಟೇಶ್ವರ ಇವರಿಂದ ” ಸುದರ್ಶನ ವಿಜಯ ” ಎಂಬ ಯಕ್ಷಗಾನ ತಾಳಮದ್ದಳೆ ಜರಗಿತು.

ಈ ಸಂದರ್ಭದಲ್ಲಿ ಯಕ್ಷಗಾನ ಕಲಾವಿದ ವಾಸುದೇವ ಸಾಮಗರರವರ ಧರ್ಮಪತ್ನಿ ಮೀರಾ ಸಾಮಗ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ಕಾರ್ಯಕ್ರಮದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸತೀಶ್ ಬಿ ಕುಂದರ್, ಹಾಗೂ ಎಲ್ಲಾ ಸದ್ಯಸರು ಮತ್ತು ದೇವಳದ ಜೀರ್ಣೋದ್ಧಾರ ಸಮಿತಿಯ ಸದಸ್ಯರು, ಊರವರು ಉಪಸ್ಥಿತರಿದ್ದರು.