ಡೈಲಿ ವಾರ್ತೆ: 21 ಅಕ್ಟೋಬರ್ 2022

ಕಾಂತಾರ ಸಿನಿಮಾ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಡಾ.ಡಿ. ವೀರೇಂದ್ರ ಹೆಗ್ಗಡೆ ಕುಟುಂಬ

ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಶುಕ್ರವಾರ ಮಂಗಳೂರಿನ ಭಾರತ್ ಮಾಲ್ ನ ಬಿಗ್ ಸಿನೆಮಾಸ್ ನಲ್ಲಿ ದೇಶದೆಲ್ಲೆಡೆ ಸದ್ದು ಮಾಡುತ್ತಿರುವ ಕಾಂತಾರ ಚಲನಚಿತ್ರ ವೀಕ್ಷಿಸಿದರು.

ಹೇಮಾವತಿ ವಿ.ಹೆಗ್ಗಡೆ, ಮೊಮ್ಮಗಳು ಮಾನ್ಯ ಮತ್ತು ಕುಟುಂಬದವರೊಂದಿಗೆ ಆಗಮಿಸಿದ ಹೆಗ್ಗಡೆಯವರು ಕಾಂತಾರ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಕಾಂತಾರ ಸಿನಿಮಾ ತಂಡದ ಕಲಾವಿದರೂ ಕೂಡ ಹೆಗ್ಗಡೆಯವರೊಂದಿಗೆ ಸಿನೆಮಾ ವೀಕ್ಷಿಸಿದರು.