ಡೈಲಿ ವಾರ್ತೆ: 23 ಅಕ್ಟೋಬರ್ 2022

ಉಚ್ಚಿಲದಲ್ಲಿ ಹೆದ್ದಾರಿ ದಾಟುತ್ತಿದ್ದ ವೃದ್ಧನಿಗೆ ಕಾರು ಡಿಕ್ಕಿ, ಚಿಕಿತ್ಸೆ ಫಲಕಾರಿಯಾಗದೆ ವೃದ್ಧ ಸಾವು

ಉಳ್ಳಾಲ : ರಾ.ಹೆ.66 ರ ಉಚ್ಚಿಲ ಎಂಬಲ್ಲಿ ರಸ್ತೆ ದಾಟುತ್ತಿದ್ದ ವೃದ್ಧರೋರ್ವರಿಗೆ ಇನ್ನೋವ ಕಾರು ಡಿಕ್ಕಿ ಹೊಡೆದಿದ್ದು, ಆಸ್ಪತ್ರೆ ಸೇರಿದ್ದ ವೃದ್ಧ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ. ಉಚ್ಚಿಲ ನಿವಾಸಿ ನಾರಾಯಣ ಪೂಜಾರಿ(82) ಅಪಘಾತದಲ್ಲಿ ಮೃತ ಪಟ್ಟ ದುರ್ದೈವಿ.

ಕಳೆದ ಶುಕ್ರವಾರ ಸಾಯಂಕಾಲ ನಾರಾಯಣ ಅವರು ಉಚ್ಚಿಲದಲ್ಲಿ ಹೆದ್ದಾರಿ ದಾಟುತ್ತಿದ್ದ ವೇಳೆ ಕೇರಳಕ್ಕೆ ಧಾವಿಸುತ್ತಿದ್ದ ಇನ್ನೋವ ಕಾರು ಡಿಕ್ಕಿ ಹೊಡೆದಿತ್ತು. ಈ ವೇಳೆ ಗಂಭೀರ ಗಾಯಗೊಂಡ ನಾರಾಯಣ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಗಾಯಾಳು ನಾರಾಯಣ್ ಅವರು ಇಂದು ಬೆಳಿಗ್ಗೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಅಪಘಾತ ನಡೆಸಿದ್ದ ಇನ್ನೋವ ಕಾರನ್ನ ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.