ಡೈಲಿ ವಾರ್ತೆ: 30 ಅಕ್ಟೋಬರ್ 2022

ಕೊಲ್ಲೂರಿಗೆ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ವಿ.ಮುರಳಿಧರನ್ ಭೇಟಿ

ಕೊಲ್ಲೂರು: ಕೇಂದ್ರ ಸರ್ಕಾರದ ವಿದೇಶಾಂಗ ವ್ಯವಹಾರಗಳು ಮತ್ತು ಭಾರತದ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವರಾದ ವಿ.ಮುರಳಿಧರನ್ ರವರನ್ನು ಸಂಸದರಾದ ಬಿ. ವೈ ರಾಘವೇಂದ್ರ ರವರು ಕೊಲ್ಲೂರಿನಲ್ಲಿ ಭೇಟಿ ಮಾಡಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ಕ್ಷೇತ್ರದ ರೈಲ್ವೇ, ಏರ್ ಸ್ಟ್ರಿಪ್ ಹಾಗೂ ವಿವಿಧ ಯೋಜನೆಯ ವಿಷಯವನ್ನು ಚರ್ಚಿಸಿದರು.

ಈ ಸಂದರ್ಭದಲ್ಲಿ ಬೈಂದೂರು ಕ್ಷೇತ್ರದ ಶಾಸಕರಾದ
ಬಿ. ಎಂ ಸುಕುಮಾರ್ ಶೆಟ್ಟಿ , ಮಾಜಿ ರೈಲ್ವೇ ಬೋರ್ಡ್ ನಿರ್ದೇಶಕರಾದ ವೆಂಕಟೇಶ್ ಕಿಣಿ, ಗ್ರಾ. ಪಂ ಅಧ್ಯಕ್ಷರಾದ ಸಂತೋಷ್ ಭಟ್, ಬೈಂದೂರು ವಕೀಲರ ಸಂಘದ ಅಧ್ಯಕ್ಷರಾದ ಮೊಬಿ ಸಿಮ್ಸ್ ಆಡಳಿತ ಮಂಡಳಿ ಸದಸ್ಯರಾದ ದಿವಾಕರ ಶೆಟ್ಟಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.