ಡೈಲಿ ವಾರ್ತೆ: 30 ಅಕ್ಟೋಬರ್ 2022

ಭಗತ್ ಸಿಂಗ್ ಪಾತ್ರದ ಪ್ರಾಕ್ಟೀಸ್ ಮಾಡುತ್ತಿದ್ದ ಬಾಲಕ ಆಕಸ್ಮಿಕವಾಗಿ ನೇಣಿಗೆ ಸಿಲುಕಿ ಮೃತ್ಯು

ಚಿತ್ರದುರ್ಗ:ಭಗತ್ ಸಿಂಗ್ ಪಾತ್ರದ ಪ್ರಾಕ್ಟೀಸ್ ಮಾಡುತ್ತಿದ್ದ ಬಾಲಕ ಆಕಸ್ಮಿಕವಾಗಿ ನೇಣಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಸಂಜಯ್ ಗೌಡ(12) ಮೃತ ದುರ್ದೈವಿಯಾಗಿದ್ದು, ನಗರದ ಎಸ್ಎಲ್ವಿ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿದ್ದ.

ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಅಂಗವಾಗಿ ಶಾಲೆಯಲ್ಲಿ ಭಗತ್ ಸಿಂಗ್ ಪಾತ್ರ ಪ್ರದರ್ಶನ ನೀಡಲು ಸಿದ್ಧತೆ ನಡೆಸಲಾಗಿತ್ತು.ಶಾಲೆಯಲ್ಲಿ ತರಬೇತಿ ಬಳಿಕ ಮನೆಗೆ ಬಂದ ಬಾಲಕ ಮನೆಯಲ್ಲೂ ಪ್ರಾಕ್ಟೀಸ್ ಮಾಡುವಾಗ ಪ್ಯಾನಿಗೆ ನೂಲಿನ ಹಗ್ಗ ಬಿಗಿದು ಡೈಲಾಗ್ ಹೇಳುತ್ತಾ ಮಂಚದ ಮೇಲಿಂದ ಜಿಗಿದ ವೇಳೆ ಹಗ್ಗ ಬಿಗಿದು ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ.

ಮನೆಯಲ್ಲಿ ಈ ವೇಳೆ ಯಾರೂ ಇಲ್ಲದ ಕಾರಣ ರಕ್ಷಣೆ ಸಾಧ್ಯವಾಗಿಲ್ಲ.ಮನೆ ಮಂದಿ ಮನೆಗೆ ವಾಪಸ್ ಬಂದು ನೋಡಿದಾಗ ಬಾಲಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಕೂಡಲೇ ಪೋಷಕರು ಬಾಲಕನಿಗೆ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.ಈ ವೇಳೆ ಬಾಲಕ‌ ಮೃತಪಟ್ಟಿರುವುದು ವೈದ್ಯರು ದೃಢ ಪಡಿಸಿದ್ದಾರೆ.

ಚಿತ್ರದುರ್ಗ ಬಡಾವಣೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.