ಡೈಲಿ ವಾರ್ತೆ: 31 ಅಕ್ಟೋಬರ್ 2022

ಬಿಲ್ಲು ಪಾವತಿಗೆ 40% ಕಮಿಷನ್ ಬೇಡಿಕೆ : ಗುತ್ತಿಗೆದಾರನಿಂದ ದಯಾಮರಣ ಕೋರಿ ರಾಷ್ಟ್ರಪತಿ, ಪ್ರಧಾನಿಗೆ ಪತ್ರ

ಹುಬ್ಬಳ್ಳಿ: ಮತ್ತೆ 40% ಕಮಿಷನ್ ರಾಜ್ಯದಲ್ಲಿ ಸದ್ದು ಮಾಡುತ್ತಿದೆ. ಗುತ್ತಿಗೆದಾರನೋರ್ವ ಕಾಮಗಾರಿ ಬಿಲ್ ಪಾಸ್ ಮಾಡಿಲ್ಲ ಎಂದು ರಾಷ್ಟ್ರಪತಿಗೆ ದಯಾಮರಣ ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಹುಬ್ಬಳ್ಳಿಯ ಗುತ್ತಿಗೆದಾರ ಬಸವರಾಜ್ ಎಂಬವರು
ದಯಾಮರಣ ಕೋರಿ ರಾಷ್ಟ್ರಪತಿ, ಪ್ರಧಾನಿ, ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರು ಮತ್ತು ಮೂಡಗೆರೆ ತಾಲೂಕಿನ ಗ್ರಾಮ ಪಂಚಾಯಿತಿಗಳಿಗೆ ಬಸವರಾಜ್ ಪಿಪಿಇ ಕಿಟ್ ಗಳು ಸೇರಿ ಕೋವಿಡ್ ಪರಿಕರಗಳ ಸರಬರಾಜು ಮಾಡಿದ್ದರು. ಆದರೆ ಬಿಲ್ ಪಾವತಿಗೆ ವಿಳಂಬ ಮಾಡಿ ಹಣಕ್ಕೆ ಒತ್ತಾಯ ಮಾಡಿರುವ ಬಗ್ಗೆ ಆರೋಪಿಸಿರುವ ಬಗ್ಗೆ ವರದಿಯಾಗಿದೆ.

ಪ್ರಧಾನಮಂತ್ರಿ ಕಾರ್ಯಾಲಯ, ಮುಖ್ಯಮಂತ್ರಿ ಅವರ ಕಾರ್ಯಾಲಯ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಹೆಚ್ಚುವರಿ ಮುಖ್ಯಾಧಿಕಾರಿ ನಿರ್ದೇಶನ ನೀಡಿದರೂ ಬಿಲ್ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಲಾಗಿದೆ.