ಡೈಲಿ ವಾರ್ತೆ: 31 ಅಕ್ಟೋಬರ್ 2022
ಸಂಪಾದಕರು: ಇಬ್ರಾಹಿಂ ಕೋಟ
ನ್ಯೂಜಿಲ್ಯಾಂಡ್ ಕಾಮನ್ ವೆಲ್ತ್ ಪವರ್ ಲಿಫ್ಟಿಂಗ್ ಸ್ಪರ್ಧೆ ಹಿನ್ನೆಲೆ – ಧರ್ಮದರ್ಶಿ ಡಾ. ವೀರೇಂದ್ರ ಹೆಗಡೆಯವರ ಆಶೀರ್ವಾದ ಪಡೆದ ಕುಂದಾಪುರ ಸತೀಶ್ ಖಾರ್ವಿ
ಕುಂದಾಪುರ: ಕುಂದಾಪುರ ಖಾರ್ವಿ ಕೇರಿಯ ಸಾಮಾನ್ಯ ಮೀನುಗಾರ ಕುಟುಂಬದಲ್ಲಿ ಜನಿಸಿದ ಸತೀಶ್ ಖಾರ್ವಿ ಕ್ರೀಡಾಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ ಮಾಡಿದ್ದು, ಮುಂದಿನ ತಿಂಗಳು ನ್ಯೂಜಿಲೆಂಡ್ನಲ್ಲಿ ನಡೆಯಲಿರುವ ಕಾಮನ್ವೆಲ್ತ್ ಗೇಮ್ಸ್ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಸತೀಶ್ ಅವರು ಅ.30 ರಂದು ಆದಿತ್ಯವಾರ ಕುಟುಂಬ ಸಮೇತರಾಗಿ ಶ್ರೀ ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿದರು. ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಮಾಡಿ ನಂತರ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಡಾ. ವೀರೇಂದ್ರ ಹೆಗಡೆಯವರು ಸತೀಶ್ ಖಾರ್ವಿಯವರ ಸಾಧನೆಯ ಬಗ್ಗೆ ತುಂಬಾ ಹರ್ಷ ವ್ಯಕ್ತಪಡಿಸಿ, ನ್ಯೂಜಿಲ್ಯಾಂಡ್ ನಲ್ಲಿ ನಡೆಯುವ ಕಾಮನನ್ ವೆಲ್ತ್ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಯಶಸ್ವಿಯಾಗಿ ಬನ್ನಿ ಎಂದು ಆಶೀರ್ವದಿಸಿ ಶ್ರೀ ಮಂಜುನಾಥ ಸ್ವಾಮಿಯ ಬೆಳ್ಳಿಯ ನಾಣ್ಯ ನೀಡಿ, ಶಾಲು ಹೊದೆಸಿ ಗೌರವದಿಂದ ಅಭಿನಂದಿಸಿದರು.