ಡೈಲಿ ವಾರ್ತೆ: 31 ಅಕ್ಟೋಬರ್ 2022

ಸುರತ್ಕಲ್: ಅಕ್ರಮ ಟೋಲ್ ಗೇಟ್ ಧರಣಿ ನಾಲ್ಕನೇ ದಿನಕ್ಕೆ: ಜಿಲ್ಲಾಡಳಿತ ಟೋಲ್ ತೆರವು ಗೊಳಿಸದಿದ್ದರೆ ಉಪವಾಸ ಸತ್ಯಾಗ್ರಹ: ಹೊರಟ ಸಮಿತಿ


ಮಂಗಳೂರು: ಸುರತ್ಕಲ್ ಟೋಲ್ ಗೇಟ್ ತೆರವಿಗೆ ಆಗ್ರಹಿಸಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ರಾತ್ರಿ ಹಗಲು ಧರಣಿ ಸೋಮವಾರ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.


ಟೋಲ್ ಗೇಟ್ ಅನ್ನು ನವೆಂಬರ್ 7ರೊಳಗಾಗಿ ಸ್ಥಗಿತಗೊಳಿಸುವ ಭರವಸೆಯನ್ನು ಜಿಲ್ಲಾಡಳಿತ ನೀಡಿದೆ. ಆದರೆ ಇಂತಹ ಅನೇಕ ನಿಗದಿಯಾದ ದಿನಾಂಕಗಳನ್ನು ನಾವು ನೋಡಿದ್ದೇವೆ ಎಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ತಿಳಿಸಿದೆ.

ಅಕ್ಟೋಬರ್ 18 ರಂದು ಟೋಲ್ ಗೇಟ್ ಕಿತ್ತೆಸೆಯಲು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸದಸ್ಯರು ಮುತ್ತಿಗೆ ಹಾಕಿದ್ದರು. ಈ ವೇಳೆ ಪೊಲೀಸರು ಹೋರಾಟಗಾರರನ್ನು ತಡೆದಿದ್ದರು. ಇದೀಗ ಅನಿರ್ದಿಷ್ಟಾವಧಿ ಧರಣಿ ನಡೆಯುತ್ತಿದ್ದು, ಟೋಲ್ ಗೇಟ್ ತೆರವಿಗೆ ಜಿಲ್ಲಾಡಳಿತ ಕ್ರಮ ಕೈಗೊಳ್ಳದೇ ಇದ್ದರೆ, ಉಪವಾಸ ಸತ್ಯಾಗ್ರಹ ನಡೆಸಲು ಹೋರಾಟಗಾರರು ಎಚ್ಚರಿಕೆ ನೀಡಿದ್ದಾರೆ.