ಡೈಲಿ ವಾರ್ತೆ: 31 ಅಕ್ಟೋಬರ್ 2022

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ರವಿಕುಮಾರ್ ನೇಮಕ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಐಎಎಸ್ ಅಧಿಕಾರಿ ರವಿಕುಮಾರ್ ಎಂ ಆರ್ ನೇಮಕಗೊಂಡಿದ್ದಾರೆ.

ರವಿಕುಮಾರ್ ಅವರು 2012 ರ ಬ್ಯಾಚ್‌ನ ಕರ್ನಾಟಕ ಕೇಡರ್‌ನ ಐಎಎಸ್ ಆಗಿದ್ದಾರೆ.
ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಡಾ. ರಾಜೇಂದ್ರ ಕೆ.ವಿ ವರ್ಗಾಣೆಯ ಬಳಿಕ ಡಾ. ಕುಮಾರ್ ಅವರಿಗೆ ಪ್ರಭಾರ ಜಿಲ್ಲಾಧಿಕಾರಿಯಾಗಿ ಜವಾಬ್ದಾರಿ ನೀಡಲಾಗಿತ್ತು. ಇದೀಗ ಆ ಜವಾಬ್ದಾರಿಯನ್ನು ರವಿಕುಮಾರ್ ಎಂ ಆರ್ ಅವರಿಗೆ ಹಸ್ತಾಂತರಿಸಿ ಸರಕಾರ ಆದೇಶ ಹೊರಡಿಸಿದೆ.