ಡೈಲಿ ವಾರ್ತೆ: 05 ನವಂಬರ್ 2022

ಪುತ್ತೂರು: SDPI ನಾಯಕ ಶಾಫೀ ಬೆಳ್ಳಾರೆ, ಇಕ್ಬಾಲ್ ಬೆಳ್ಳಾರೆ ಸೇರಿ ಮೂವರು ಅರೆಸ್ಟ್

ಪುತ್ತೂರು;ಎನ್ ಐಎ ಅಧಿಕಾರಿಗಳು ದಾಳಿ ನಡೆಸಿ ಎಸ್ ಡಿಪಿಐ ರಾಜ್ಯ ಕಾರ್ಯದರ್ಶಿ ಶಾಫೀ ಬೆಳ್ಳಾರೆಯನ್ನು ಬಂಧಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ದಕ್ಷಿಣಕನ್ನಡ,ಮೈಸೂರು ಸೆರಿದಂತೆ ಹಲವೆಡೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿರುವ ಬಗ್ಗೆ ವರದಿಯಾಗಿದೆ.

ಶಾಪೀ ಬೆಳ್ಳಾರೆ, ಇಕ್ಬಾಲ್ ಬೆಳ್ಳಾರೆ, ಸುಳ್ಯದ ಇಬ್ರಾಹೀಂ ಶಾಫೀಗೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಯಾವ ಪ್ರಕರಣಕ್ಕೆ ಸಂಬಂಧಿಸಿ ವಶಕ್ಕೆ ಪಡೆದುಕೊಂಡಿದ್ದಾರೆ ಎಂಬ ಬಗ್ಗೆ ಮಾಹಿತಿ ಇಲ್ಲ.ಈ ಕುರಿತು ಹೆಚ್ಚಿನ‌ ಮಾಹಿತಿ ನಿರೀಕ್ಷಿಸಲಾಗಿದೆ.

ಪ್ರವೀಣ್ ಕೊಲೆ ಹಿನ್ನೆಲೆ ಎರಡು ದಿನಗಳ ಹಿಂದೆಯಷ್ಟೇ ಪೊಲೀಸರು ನಾಲ್ವರು ಆರೋಪಿಗಳ ಪೋಟೋ ಸಹಿತ ಮಾಹಿತಿ ನೀಡಿದವರಿಗೆ ಹಣಕಾಸಿನ ಬಹುಮಾನ ಕೂಡ ಘೋಷಿಸಿದ್ದರು. ಮೊಹಮ್ಮದ್ ಮುಸ್ತಫಾ ಮತ್ತು ತುಫೈಲ್ ಬಗ್ಗೆ ಮಾಹಿತಿ‌ ನೀಡಿದರೆ 5 ಲಕ್ಷ ಹಾಗೂ ಉಮರ್ ಫಾರೂಕ್‌ ಹಾಗೂ ಅಬೂಬಕರ್ ಸಿದ್ದಿಕ್‌ ಬಗ್ಗೆ ಮಾಹಿತಿ ನೀಡಿದರೆ 2 ಲಕ್ಷ ಬಹುಮಾನ ಘೋಷಿಸಿದ್ದರು.ಇದರ ಬೆನ್ನಲ್ಲೇ ಎನ್ ಐಎ ಈ ಮೂವರನ್ನು ವಶಕ್ಕೆ ಪಡೆದುಕೊಂಡ ಬಗ್ಗೆ ವರದಿಯಾಗಿದೆ.