ಡೈಲಿ ವಾರ್ತೆ: 09 ನವಂಬರ್ 2022

ಕುಂದಾಪುರ: ಕೋಡಿ ಬ್ಯಾರೀಸ್ ಪಿ.ಯು.ಕಾಲೇಜು ನಲ್ಲಿ ಕಾನೂನು ಅರಿವು ಕಾರ್ಯಕ್ರಮ

ಕುಂದಾಪುರ : ಕುಂದಾಪುರ ವಕೀಲರ ಸಂಘ (ರಿ.), ಕುಂದಾಪುರ, ತಾಲೂಕು ಕಾನೂನು ಸೇವಾ ಸಮಿತಿ ಕುಂದಾಪುರ ಹಾಗೂ ಬ್ಯಾರೀಸ್ ಪಿ.ಯು.ಕಾಲೇಜು, ಕೋಡಿ ಇವರ ಆಶ್ರಯದಲ್ಲಿ ದಿನಾಂಕ 09 ರಂದು ಬುಧವಾರ ” ಕಾನೂನು ಅರಿವು” ಕಾರ್ಯಕ್ರಮ ನಡೆಯಿತು.

ಕುಂದಾಪುರದ ಹೆಚ್ಚುವರಿ ಜಿಲ್ಲಾ & ಸತ್ರ ನ್ಯಾಯಾಧೀಶರಾದ ಶ್ರೀ ಅಬ್ದುಲ್ ಹುಸೇನ್ ರಹೀಮ್ ಶೇಖ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಬ್ಯಾರೀಸ್ ಪಿ.ಯು.ಕಾಲೇಜಿನ‌ ಆಡಳಿತ ಮಂಡಳಿ ಅಧ್ಯಕ್ಷರಾದ ಪಿ.ಎಮ್. ರೆಹಮಾನ್ ಸಾಹೇಬ್ ಅಧ್ಯಕ್ಷತೆಯನ್ನು ವಹಿಸಿದ್ದರು.
ಕುಂದಾಪುರ ಹಿರಿಯ ನ್ಯಾಯಾಧೀಶರಾ ರಾಜು ಎನ್
& ಕುಂದಾಪುರ ವಕೀಲರ ಸಂಘದ ಅಧ್ಯಕ್ಷರಾದ ಬನ್ನಾಡಿ ಸೋಮನಾಥ ಹೆಗ್ಡೆ ಮುಖ್ಯ ಅತಿಥಿಗಳಾಗಿದ್ದರು.

ಕುಂದಾಪುರ ವಕೀಲರ ಸಂಘದ ಸದಸ್ಯರಾದ ನ್ಯಾಯವಾದಿ ಕೆ.ರಾಜಾರಾಮ್ ಶೆಟ್ಟಿ ಸಂಪನ್ಮೂಲ ವ್ಯಕ್ತಿಯಾಗಿದ್ದರು.