ಡೈಲಿ ವಾರ್ತೆ: 15 ನವಂಬರ್ 2022
ಬೆಂಗಳೂರು; ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಯುವಕನ ಕೊಲೆ
ಬೆಂಗಳೂರು: ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ವ್ಯಕ್ತಿಯೊರ್ವನನ್ನು ಹತ್ಯೆ ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾಚೋಹಳ್ಳಿಯಲ್ಲಿ ನಡೆದಿದೆ.
ತಮಿಳುನಾಡಿನ ವೆಲೂರು ಮೂಲದ ನಟರಾಜ್ (35) ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ.
ನಟರಾಜ್ ನಿನ್ನೆ ರಾತ್ರಿ ಸ್ನೇಹಿತರೊಂದಿಗೆ ಪಾರ್ಟಿ ಮಾಡಲು ತೆರಳಿದ್ದ. ಈ ವೇಳೆ ದುಷ್ಕರ್ಮಿಗಳು ಹತ್ಯೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾರೆ.
ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣಾ ಪೊಲೀಸರು ಭೇಟಿ
ನೀಡಿ ಪರಿಶೀಲನೆ ನಡೆಸಿ, ತನಿಖೆ ಕೈಗೊಂಡಿದ್ದಾರೆ.