ಡೈಲಿ ವಾರ್ತೆ: 29 ನವಂಬರ್ 2022

ಹಿರಿಯಡ್ಕ: ಬೈಕ್ ಹಾಗೂ ಟೆಂಪೋ ನಡುವೆ ಅಪಘಾತ: ಬೈಕ್ ಸವಾರ ಸ್ಥಳದಲ್ಲಿಯೇ ಮೃತ್ಯು.!


ಉಡುಪಿ : ಹಿರಿಯಡಕ ಪೊಲೀಸ್ ಠಾಣಾ ಕುಕ್ಕೆಹಳ್ಳಿ ಬಳಿ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಫಟನೆ ನ.28ರ ಬೆಳಿಗ್ಗೆ ನಡೆದಿದೆ.

ಮೃತರನ್ನು ಬೆಳ್ಳಂಪಳ್ಳಿ ನಿವಾಸಿ ರಾಜೇಶ್ ಆಚಾಯ೯ ಎಂದು ಗುರುತಿಸಲಾಗಿದೆ. ಕುಕ್ಕೆಹಳ್ಳಿ ಕಡೆಯಿಂದ ಕುಕ್ಕಿಕಟ್ಟೆ ಕಡೆಗೆ ಹೋಗುತ್ತಿದ್ದ ಟೆಂಪೋ ಎದುರಿನಲ್ಲಿ ಬರುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ.

ಇದರಿಂದ ರಸ್ತೆಗೆ ಬಿದ್ದ ಬೈಕ್ ಸವಾರನ ಮೇಲೆ ಟೆಂಪೋ ಚಕ್ರ ಹರಿದು ಸ್ಥಳದಲ್ಲೇ ಮೃತಪಟ್ಟರು ಎಂದು ತಿಳಿದುಬಂದಿದೆ.