ಡೈಲಿ ವಾರ್ತೆ: 29 ನವಂಬರ್ 2022

ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾಗಲು ಯತ್ನ: ಜೀಪಿನಿಂದ ಹಾರಿದ ಯುವಕ ಸಾವು!

ಚಾಮರಾಜನಗರ: ಪೊಲೀಸರಿಂದ ಪರಾರಿಯಾಗಲು ಯತ್ನಿಸಿ ಯುವಕ, ಪ್ರಾಣವನ್ನೇ ಕಳೆದುಕೊಂಡಿರುವ ದಾರುಣ ಘಟನೆ ಯಳಂದೂರು ತಾಲೂಕಿನ ಯರಿಯೂರು ಗ್ರಾಮದ ಸಮೀಪ ಮಂಗಳವಾರ ನಡೆದಿದೆ.

ಯಳಂದೂರು ತಾಲೂಕಿನ ಕುಂತೂರುಮೋಳೆ ಗ್ರಾಮದ ಲಿಂಗರಾಜು ಎಂಬಾತ ಮೃತ ದುರ್ದೈವಿ. ಅಪ್ರಾಪ್ತಗೆ ತಲೆಕೆಡಿಸಿ, ಆಕೆಯನ್ನು ಕರೆದೊಯ್ದ ಬಗ್ಗೆ ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಕಳೆದ 23 ರಂದು ಪ್ರಕರಣ ದಾಖಲಾಗಿತ್ತು.

ಮಂಗಳವಾರ ಆತನನ್ನು ಪೊಲೀಸರು ಠಾಣೆಗೆ ಕರೆದೊಯ್ಯುವಾಗ ಪರಾರಿಯಾಗಲು ಯತ್ನಿಸಿ ಜೀಪಿನಿಂದ ಲಿಂಗರಾಜು ಹಾರಿ ತೀವ್ರವಾಗಿ ಗಾಯಗೊಂಡಿದ್ದಾನೆ. ಬಳಿಕ, ಆಸ್ಪತ್ರೆಗೆ ರವಾನಿಸಲಾಯಿತರಾದರೂ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಯುವಕನ ಸಾವು ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ.