ಡೈಲಿ ವಾರ್ತೆ: 30 ನವಂಬರ್ 2022

ಸ್ನೇಹಿತರಿಗೆ ಕರೆ ಮಾಡಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಆಟೋ ಚಾಲಕ.!

ಬೆಳ್ತಂಗಡಿ:ಆಟೋ ಚಾಲಕನೋರ್ವ ಸ್ನೇಹಿತರಿಗೆ ಕರೆ ಮಾಡಿ ತಾನು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದು
ಇದೀಗ ಆತನಿಗೆ ಹುಡುಕಾಟ ನಡೆಯುತ್ತಿದೆ.

ಬೆಳ್ತಂಗಡಿಯಲ್ಲಿ ರಿಕ್ಷಾ ಚಾಲಕಾನಾಗಿರುವ ಪ್ರವೀಣ್ ಪಿಂಟೊ ಎಂಬವರು ಗುರುವಾಯನಕೆರೆಯ ಕೆರೆಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ಪ್ರವೀಣ್ ಕರೆ ಸ್ವೀಕರಿಸಿದ ಸ್ನೇಹಿತರು ಕೆರೆ ಬಳಿ ಬಂದು ನೋಡಿದಾಗ ಗುರುವಾಯನಕೆರೆ ಕೆರೆಯ ಬದಿಯಲ್ಲಿ ಪ್ರವೀಣ್ ಚಪ್ಪಲಿ ಹಾಗೂ ಆಧಾರ್ ಕಾರ್ಡ್ ಲಭಿಸಿದೆ.


ಇದೀಗ ಪ್ರವೀಣ್ ಕೆರೆಗೆ ಹಾರಿರಬಹುದೆಂದು ಶಂಕಿಸಿ ಸ್ಥಳೀಯರು, ಅಗ್ನಿಶಾಮಕ ದಳ, ಸ್ವಯಂಸೇವಕರು , ಪೊಲೀಸರು ಪ್ರವೀಣ್ ಗೆ ಹುಡುಕಾಟ ನಡೆಸುತ್ತಿದ್ದಾರೆ. ಕೆರೆಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿರುವುದರಿಂದ ಹುಡುಕಾಟಕ್ಕೆ ಕೊಂಚ ಸವಾಲಾಗುತ್ತಿದೆ ಎನ್ನಲಾಗಿದೆ.

ಪ್ರವೀಣ್ ಯಾಕಾಗಿ ಈ ರೀತಿ ಮಾಡಿದ್ದಾರೆ ಎಂಬ ಬಗ್ಗೆ ಮಾಹಿತಿ ಇಲ್ಲ. ಈ ಕುರಿತು ಹೆಚ್ಚಿನ‌ ಮಾಹಿತಿ ನಿರೀಕ್ಷಿಸಲಾಗಿದೆ.