ಡೈಲಿ ವಾರ್ತೆ: 30 ನವಂಬರ್ 2022
ಉಡುಪಿ:-ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನದ ಸರ ಕಳವು
ಉಡುಪಿ:-ಗ್ರಾಹಕರ ಸೋಗಿನಲ್ಲಿ ಬಂದು ಇಬ್ಬರು ಮಹಿಳೆಯರು ಆಭರಣದ ಅಂಗಡಿ ಮಾಲೀಕನ ಗಮನ ಬೇರೆಡೆಗೆ ಸೆಳೆದು ಚಿನ್ನದ ಸರ ಕಳವು ಮಾಡಿಕೊಂಡು ಹೋಗಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
ಉಡುಪಿಯ ಕನಕದಾಸ ಮಾರ್ಗದಲ್ಲಿರುವ ಪಾಂಡುರಂಗ ಜುವೆಲ್ಲರ್ಸ್ ಎಂಬ ಆಭರಣದ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ ಬಂದ ಇಬ್ಬರು ಮಹಿಳೆಯರು ಹಾಗೂ ಓರ್ವ ಪುರುಷ ಚಿನ್ನದ ಸರವನ್ನು ಕಳವು ಮಾಡಿಕೊಂಡು ಹೋಗಿದ್ದಾರೆ.
ಈ ಬಗ್ಗೆ ಅಂಗಡಿ ಮಾಲಿಕ ಸತ್ಯನಾರಾಯಣ ಶೇಟ್ ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ. ಕಳವಾದ ಚಿನ್ನದ ಸರದ ಮೌಲ್ಯ 22 ಸಾವಿರ ಆಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.