ಡೈಲಿ ವಾರ್ತೆ: 30 ನವಂಬರ್ 2022

ಬೆಳ್ತಂಗಡಿ:ಕೆರೆಗೆ ಹಾರಿದ್ದನೆನ್ನಲಾದ ಆಟೋ ಚಾಲಕನ ಮೃತದೇಹ ಗುರುವಾಯನಕೆರೆಯ ಕೆರೆಯಲ್ಲಿ ಪತ್ತೆ:

ಬೆಳ್ತಂಗಡಿ: ಆತ್ಮಹತ್ಯೆ ಮಾಡಿಕೊಳ್ಳುತ್ತೇನೆಂದು ಗೆಳೆಯರಿಗೆ ಹೇಳಿ ಬೆಳಿಗ್ಗೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಗುರುವಾಯನಕೆರೆಯ ಕೆರೆಯಲ್ಲಿ ಪತ್ತೆಯಾಗಿದೆ.

ರಿಕ್ಷಾ ಡ್ರೈವರ್ ಪ್ರವೀಣ್ ಮೃತದೇಹ ಪತ್ತೆಯಾಗಿದೆ. ಬೆಳ್ತಂಗಡಿಯಲ್ಲಿ ರಿಕ್ಷಾ ಚಾಲಕನಾಗಿದ್ದ ಪ್ರವೀಣ್ ಇಂದು ಮುಂಜಾನೆ 4 ಗಂಟೆ ಸುಮಾರಿಗೆ ತನ್ನ ಸ್ನೇಹಿತರೊಬ್ಬರಿಗೆ ಕರೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದ ಎನ್ನುವುದು ಪ್ರಚಾರ.ಆದರೆ ಪತ್ನಿಯ ಜೊತೆ ಕಾರ್ಯಕ್ರಮಕ್ಕೆ ಹೋಗುತ್ತೇನೆಂದು ಹೇಳಿ ಹೋದವನಿಗೆ ದಿಡೀರ್ ಏನಾಯಿತು ಎನ್ನುವುದು ಇದೀಗ ಗುಸು ಗುಸು ಮಾತುಗಳು ಕೇಳಿ ಬರುತ್ತಿದೆ.

ಪ್ರವೀಣ್ ಆತ್ಮಹತ್ಯೆ ಮಾಡಿದ್ದಾನೆಂದು ಕೆರೆಯ ಬಳಿ ಬಂದು ನೋಡಿದಾಗ ಚಪ್ಪಲಿ, ಆಧಾರ್ ಕಾರ್ಡ್ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಅಗ್ನಿಶಾಮಕ ದಳ, ಬೆಳಾಲು ವಿಪತ್ತು ನಿರ್ವಹಣಾ ತಂಡ ಹಾಗೂ ಸ್ಥಳೀಯರು ಕೆರೆಯಲ್ಲಿ ಶೋಧ ಕಾರ್ಯ ನಡೆಸಿ ಮೃತದೇಹ ಪತ್ತೆ ಮಾಡಿದ್ದಾರೆ.

ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.ಪ್ರವೀಣ್ ಪಿಂಟೋ ಸಾವು ಹಲವು‌ ಅನುಮಾನಗಳಿಗೆ ಕಾರಣವಾಗಿದೆ.ಇದು ಆತ್ಮಹತ್ಯೆಯೋ ಅಥವಾ ಇನ್ನೇನದರೂ ನಡೆದಿದೆಯಾ ಎಂಬ ಬಗ್ಗೆ ಕೂಡ ಸ್ಥಳೀಯರು ಗುಸು ಗುಸು‌ ಮಾತನಾಡುತ್ತಿದ್ದಾರೆ. ಬೆಳಿಗ್ಗೆ ಅವರೇ ಫೋನ್ ಮಾಡಿದ್ರಾ ಅಥವಾ ಇನ್ಯಾರಾದರು ಮಾಡಿಸಿದ್ರಾ ಎನ್ನುವುದು ತನಿಖೆಯಾಗಬೇಕಿದೆ.