ಡೈಲಿ ವಾರ್ತೆ: 01 ಡಿಸೆಂಬರ್ 2022

ಬ್ರಹ್ಮಾವರ: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಖಾಸಗಿ ಬಸ್ ಢಿಕ್ಕಿ, ವ್ಯಕ್ತಿ ಸ್ಥಳಲ್ಲೇ ಮೃತ್ಯು!

ಬ್ರಹ್ಮಾವರ: ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬ್ರಹ್ಮಾವರ ಆಕಾಶವಾಣಿ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನ. 30ರ ರಾತ್ರಿ ನಡೆದಿದೆ.

ಮೃತರನ್ನು ಹಂದಾಡಿಯ ಶೇಖರ್ ಎಂದು ಗುರುತಿಸಲಾಗಿದೆ. ಕುಂದಾಪುರದಿಂದ ಉಡುಪಿ ಕಡೆಗೆ ಹೋಗುತ್ತಿದ್ದ ವೇಗದೂತ ಬಸ್ ರಸ್ತೆ ದಾಟುತ್ತಿದ್ದ ಶೇಖರ್ ಅವರಿಗೆ ಢಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.