ಡೈಲಿ ವಾರ್ತೆ: 01 ಡಿಸೆಂಬರ್ 2022

ಮಂಜೇಶ್ವರ: ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕೆಎಸ್ ಆರ್ ಟಿಸಿ ಬಸ್, ಹಲವರಿಗೆ ಗಾಯ

ಮಂಜೇಶ್ವರ: KSRTC ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಮಗುಚಿ ಬಿದ್ದ ಪರಿಣಾಮ 16 ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಮಂಜೇಶ್ವರ ಪೊಸೋಟ್ ಬಳಿ‌ ನಡೆದಿದೆ.

ಸರಿಸುಮಾರು 35 ಕ್ಕೂ ಅಧಿಕ ಪ್ರಯಾಣಿಕರಿದ್ದ ಮಂಗಳೂರಿನಿಂದ ಕಾಸರಗೋಡಿಗೆ ಹೋಗುತ್ತಿದ್ದ ಬಸ್ ಪೊಸೋಟ್ ಪೆಟ್ರೋಲ್ ಪಂಪ್ ಬಳಿ ಅಪಘಾತ ಸಂಭವಿಸಿದೆ.

ಬಸ್ಸಿನಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ಸ್ಥಳೀಯರು, ಪೊಲೀಸರು ಹೊರ ತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ.
15 ಮಂದಿಯನ್ನು ವಿವಿಧ ಅಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.