ಡೈಲಿ ವಾರ್ತೆ: 11 ಡಿಸೆಂಬರ್ 2022

ಮಾಂಡೌಸ್ ಚಂಡಮಾರುತ ಎಫೆಕ್ಟ್: 5 ಮಂದಿ ಬಲಿ

ಚೆನ್ನೈ: ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತದಿಂದ ಉಂಟಾಗಿರುವ ಮಾಂಡೌಸ್ ಚಂಡಮಾರುತದ ಪರಿಣಾಮ ತಮಿಳುನಾಡಿನಲ್ಲಿ‌ ಭಾರಿ ಮಳೆ ಮತ್ತು ಅವಘಡಗಳಲ್ಲಿ 5 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ತಮಿಳುನಾಡಿನ ಕಾಂಚೀಪುರಂ, ಚೆಂಗಪಟ್ಟು ಮತ್ತು ವಿಲ್ಲುಪುರಂ ಜಿಲ್ಲೆಗಳಲ್ಲಿ ಭಾನುವಾರವೂ ರೆಡ್ ಅಲರ್ಟ್ ಘೋಷಣೆ ಮುಂದುವರಿದಿದೆ. ತೀವ್ರ ಗಾಳಿ ಮತ್ತು ಮಳೆಯನ್ನು ಪರಿಗಣಿಸಿ ತಮಿಳುನಾಡು ಸರ್ಕಾರ ಸೋಮವಾರ ಶಾಲಾ-ಕಾಲೇಜುಗಳು, ಇತರ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸುವ ಸಾಧ್ಯತೆಯಿದೆ ಎಂದು ತಿಳಿದು‌ಬಂದಿದೆ.