ಡೈಲಿ ವಾರ್ತೆ: 12 ಡಿಸೆಂಬರ್ 2022

ಶಾಲಾ ಪ್ರವಾಸದಿಂದ ವಾಪಾಸ್‌ ಆಗುವ ವೇಳೆ ಬಸ್‌ ಪಲ್ಟಿ: ಇಬ್ಬರು ವಿದ್ಯಾರ್ಥಿಗಳು ಮೃತ್ಯು

ಮುಂಬಯಿ: ಶಾಲಾ ಪ್ರವಾಸಕ್ಕೆ ಹೋಗಿ ವಾಪಾಸ್ ಆಗುತ್ತಿದ್ದ ವೇಳೆ ರಸ್ತೆ ಮಧ್ಯಯೇ ಬಸ್‌ ಉರುಳಿ ಬಿದ್ದು ಇಬ್ಬರು ವಿದ್ಯಾರ್ಥಿಗಳು ಮೃತ ಪಟ್ಟಿರುವ ಘಟನೆ ರಾಯಗಡ ಜಿಲ್ಲೆಯ ಖೋಪೋಲಿಯಲ್ಲಿ ಡಿ. 11 ರಂದು ಸಂಜೆ ಭಾನುವಾರ ನಡೆದಿದೆ.

ತರಬೇತಿ ಸಂಸ್ಥೆಯ 10ನೇ ತರಗತಿಯ ಇಬ್ಬರು ಶಿಕ್ಷಕರು ಸೇರಿ ಒಟ್ಟು 50 ಮಂದಿ ಮುಂಬೈನ ಚೆಂಬೂರ್ ನಿಂದ ಪ್ರವಾಸಕ್ಕೆ ಹೊರಟಿದ್ದರು. ಲೋನಾವಾಲಾ ಪ್ರವಾಸಿಗರು ಹಿಂತಿರುಗಿ ಬರುತ್ತಿದ್ದ ವೇಳೆ ರಾತ್ರಿ 8 ಗಂಟೆ ಸುಮಾರಿಗೆ ಹಳೆಯ ಪುಣೆ – ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್‌ ಪಲ್ಟಿ ಆಗಿದೆ.

ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಉಳಿದವರ ಕೈ, ತಲೆಯ ಭಾಗಕ್ಕೆ ಏಟು ಬಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ಥಳೀಯರು ಘಟನಾ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯವನ್ನು ಮಾಡಿದ್ದಾರೆ.