ಡೈಲಿ ವಾರ್ತೆ: 29 ಡಿಸೆಂಬರ್ 2022

ಕಾಡು ಕೋಣ ತಿವಿದು ವ್ಯಕ್ತಿ ಸಾವು..!

ಚಿಕ್ಕಮಗಳೂರು: ಕಾಡು ಪ್ರಾಣಿಗಳ ಹಾವಳಿಗೆ ಕಾಫಿನಾಡಿನ ಜನತೆ ತತ್ತರಿಸಿದ್ದು, ಆನೆಗಳ ಉಪಟಳದ ಬಳಿಕ ಇದೀಗ ಕಾಡುಕೋಣವೊಂದು ವ್ಯಕ್ತಿಯೊಬ್ಬರನ್ನು ತಿವಿದು ಹತ್ಯೆ ಮಾಡಿದೆ.

ಸೋಮಶೇಖರ್ (45) ಮೃತ ಪಟ್ಟ ದುರ್ದೈವಿಯಾಗಿದ್ದು, ಇವರು ಕಳಸ ತಾಲೂಕಿನ ತೋಟದೂರಿನ ತಮ್ಮ ತೋಟದಲ್ಲಿ ಕೆಲಸ ಮಾಡುವಾಗ ಏಕಾಏಕಿ ದಾಳಿ ನಡೆಸಿದ ಕಾಡುಕೋಣ ತಿವಿದು ಹತ್ಯೆ ಮಾಡಿದೆ.

ಸೋಮಶೇಖರ್ ಅವರು ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಕಾಡುಕೋಣ ತಿವಿದಿದೆ. ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡ ಅವರು ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಹೆಚ್ಚಿನ ಮಾಹಿತಿಗಳಿಗಾಗಿ ನಿರೀಕ್ಷಿಸಲಾಗುತ್ತಿದೆ.